‘ಕೋವಿಡ್ ಲಸಿಕೆಯು ಜನರಲ್ಲಿ ಯಾವ ರೀತಿಯಲ್ಲಿ ಪ್ರತಿಕಾಯಗಳನ್ನು ವೃದ್ಧಿ ಮಾಡಿದೆ, ಲಸಿಕೆ ಪಡೆಯದವರಲ್ಲಿ ಯಾವ ರೀತಿಯ ಪರಿಣಾಮಗಳು ಇರುತ್ತವೆ ಎಂಬುದನ್ನು ತಿಳಿಯಲು ಸಮೀಕ್ಷೆ ನಡೆಸಲಾಗಿತ್ತು. ಆದರೆ, ಸಮೀಕ್ಷೆಯ ಅಂತಿಮ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ನಗರದ ಹೆಚ್ಚು ನಿವಾಸಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಿ. ರಂದೀಪ್ ಹೇಳಿದರು.