‘ಪೇಜಾವರಶ್ರೀ ನಿಧನದ ಶೋಕಾ ಚರಣೆ ಮೂರು ದಿನಗಳ ಕಾಲ ಇರಲಿದೆ. ಹಾಗಾಗಿ, ಚುನಾವಣೆ ನಡೆಸುವುದು ಸೂಕ್ತವಲ್ಲ. ನಮ್ಮ ಪಕ್ಷದ ಸದಸ್ಯರು ಸೋಮವಾರ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವು
ದಿಲ್ಲ. ಅಲ್ಲದೇ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಆಯ್ಕೆಯೂ ಅಂತಿಮಗೊಂಡಿಲ್ಲ. ಹಾಗಾಗಿ, ಸಭೆ ಮತ್ತೆ ಮುಂದಕ್ಕೆ ಹೋಗಲಿದೆ’ ಎಂದು ಹೆಸರು ಬಹಿರಂಗ ಪಡಿಸಲು ಬಯಸದ ಬಿಜೆಪಿ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.