<p><strong>ಬೆಂಗಳೂರು</strong>: ಸರ್ಕಾರ ಏರ್ಪಡಿಸುವ ಸಭೆ ಸಮಾರಂಭಗಳಲ್ಲಿ ಹಾರ–ತುರಾಯಿ ನೀಡುವ ಬದಲು ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿ ನಾಂದಿ ಹಾಡಿದ ಬೆನ್ನಲ್ಲೇ ಬಿಬಿಎಂಪಿಯೂ ಇದೇ ಕ್ರಮವನ್ನು ಅನುಸರಿಸಿದೆ.</p>.<p>ಬಿಬಿಎಂಪಿ ಏರ್ಪಡಿಸುವ ಎಲ್ಲಾ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ-ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡುವ ಶಿಷ್ಟಾಚಾರವನ್ನು ರದ್ದುಪಡಿಸಲಾಗಿದೆ. ಇಂತಹ ಉಡುಗೊರೆಗಳ ಬದಲು ರಾಜ್ಯದ ಆಡಳಿತ ಭಾಷೆಯಾದ ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಬುಧವಾರ ಸುತ್ತೋಲೆ ಹೊರಡಿಸಿದ್ದಾರೆ.</p>.<p>‘ರಾಜ್ಯ ಸರ್ಕಾರ ಮತ್ತು ಸರ್ಕಾರದ ಅಧೀನದ ಸಂಸ್ಥೆಗಳು ಏರ್ಪಡಿಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ-ತುರಾಯಿ, ಹಣ್ಣಿನ ಬುಟ್ಟಿಗಳನ್ನು ಉಡುಗೊರೆಯನ್ನಾಗಿ ನೀಡಬಾರರು. ಶಾಲು ಹೊದಿಸಬಾರದು ಹಾಗೂ ಅದರ ಬದಲು ಕನ್ನಡ ಪುಸ್ತಕಗಳನ್ನು ನೀಡಬಹುದು ಎಂಬ ನಿರ್ದೇಶನವಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮುಖ್ಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ್ಕಾರ ಏರ್ಪಡಿಸುವ ಸಭೆ ಸಮಾರಂಭಗಳಲ್ಲಿ ಹಾರ–ತುರಾಯಿ ನೀಡುವ ಬದಲು ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿ ನಾಂದಿ ಹಾಡಿದ ಬೆನ್ನಲ್ಲೇ ಬಿಬಿಎಂಪಿಯೂ ಇದೇ ಕ್ರಮವನ್ನು ಅನುಸರಿಸಿದೆ.</p>.<p>ಬಿಬಿಎಂಪಿ ಏರ್ಪಡಿಸುವ ಎಲ್ಲಾ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ-ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡುವ ಶಿಷ್ಟಾಚಾರವನ್ನು ರದ್ದುಪಡಿಸಲಾಗಿದೆ. ಇಂತಹ ಉಡುಗೊರೆಗಳ ಬದಲು ರಾಜ್ಯದ ಆಡಳಿತ ಭಾಷೆಯಾದ ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಬುಧವಾರ ಸುತ್ತೋಲೆ ಹೊರಡಿಸಿದ್ದಾರೆ.</p>.<p>‘ರಾಜ್ಯ ಸರ್ಕಾರ ಮತ್ತು ಸರ್ಕಾರದ ಅಧೀನದ ಸಂಸ್ಥೆಗಳು ಏರ್ಪಡಿಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ-ತುರಾಯಿ, ಹಣ್ಣಿನ ಬುಟ್ಟಿಗಳನ್ನು ಉಡುಗೊರೆಯನ್ನಾಗಿ ನೀಡಬಾರರು. ಶಾಲು ಹೊದಿಸಬಾರದು ಹಾಗೂ ಅದರ ಬದಲು ಕನ್ನಡ ಪುಸ್ತಕಗಳನ್ನು ನೀಡಬಹುದು ಎಂಬ ನಿರ್ದೇಶನವಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮುಖ್ಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>