<p><strong>ಬೆಂಗಳೂರು</strong>: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದರೆ ಕೂಡಲೇ ಟ್ಯಾಂಕರ್ಗಳ ಮೂಲಕ ನೀರು ಪೂರೈಸಲು ಸೂಚಿಸಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.</p>.<p>110 ಹಳ್ಳಿಗಳಿಗೆ ಮಾತ್ರ ಕುಡಿಯುವ ನೀರಿನ ಪೂರೈಕೆ ಜವಾಬ್ದಾರಿ ಬಿಬಿಎಂಪಿಗಿರುವುದು. ಆದ್ದರಿಂದ, ಕೊಳವೆಬಾವಿ ಕೊರೆಯುವುದು ತಡವಾದರೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಇದಕ್ಕೆ ಟ್ರ್ಯಾಕರ್ ಹಾಕಿ ನೀರು ಅಗತ್ಯವಿರುವವರಿಗೆ ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ವಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.</p>.<p>ತುರ್ತು ಸಂದರ್ಭದಲ್ಲಿ ಕಾಮಗಾರಿಗಾಗಿ ₹10 ಕೋಟಿಗೆ ಅನುಮೋದನೆ ದೊರೆತಿದೆ. ಈ ಅನುದಾನದಲ್ಲಿ ಕೊಳವೆಬಾವಿ ಕೊರೆಸಲಾಗುವುದು. ಅಗತ್ಯವಿರುವ ಕಡೆ ಅದಕ್ಕೆ ಅನುಮತಿ ಪಡೆದುಕೊಂಡು ಮುಂದುವರಿಯಬೇಕಿದೆ. ಮಹದೇಪುರ ಕ್ಷೇತ್ರದವರು ಹೆಚ್ಚಿನ ಹಣ ಕೇಳಿದ್ದು, ಅನುಮೋದನೆಗೆ ಕಳುಹಿಸಲಾಗಿದೆ. ಒಪ್ಪಿಗೆ ಸಿಕ್ಕ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.</p>.<p><strong>₹44 ಕೋಟಿ ಬಿಡುಗಡೆ </strong></p><p>₹25 ಲಕ್ಷಕ್ಕೂ ಕಡಿಮೆ ಮೊತ್ತ ಬಿಲ್ಗಳನ್ನು 2021ರ ಮೇ, ಜೂನ್, ಜುಲೈ ಬಾಬ್ತಿನಲ್ಲಿ ಗುತ್ತಿಗೆದಾರರಿಗೆ ಜುಲೈ 18ರಂದು ‘ಹಣ ಭರವಸೆ ಪತ್ರ’ ಮೂಲಕ ಒಟ್ಟು ₹44.33 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತುಷಾರ್ ಗಿರಿನಾಥ್ ತಿಳಿಸಿದರು.</p>.<p>ಕಾಮಗಾರಿಗಳಿಗೆ ಸಂಬಂಧಿಸಿದ ಬಿಲ್ಲುಗಳ ನೈಜತೆ ಪರಿಶೀಲಿಸಿಕೊಂಡು ನಿಯಮಾನುಸಾರ ಬಿಡುಗಡೆ ಮಾಡಲಾಗಿದೆ. ಒಬ್ಬರಿಗೆ ಗರಿಷ್ಠ ಮೂರು ಬಿಲ್ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.</p>.<p>ಎಸ್ಐಟಿ ತನಿಖೆ ಪೂರ್ಣಗೊಂಡ ಮೇಲೆ ಅದರನುಸಾರ ಮುಂದಿನ ಬಿಲ್ಗಳನ್ನು ಪಾವತಿ ಮಾಡಲಾಗುತ್ತದೆ ಎಂದರು.</p>.<p><strong>ಮೊದಲೇ ನೀಡಿದ್ದರು </strong></p><p>‘ಹಣ ಭರವಸೆ ಪತ್ರ’ವನ್ನು ₹25 ಲಕ್ಷಕ್ಕೂ ಕಡಿಮೆ ಮೊತ್ತ ಬಿಲ್ಗಳಿಗೆ ಜುಲೈ 18ರಂದೇ ಬಿಡುಗಡೆ ಮಾಡಲಾಗಿದೆ. ಎಲ್ಲ ಗುತ್ತಿಗೆದಾರರಿಗೆ ಬಾಕಿ ಇರುವ ₹675 ಕೋಟಿ ಹಾಗೂ ₹2,500 ಕೋಟಿ ಹಣ ಬಿಡುಗಡೆ ಮಾಡಿ ಎಂದು ನಾವು ಕೇಳುತ್ತಿದ್ದೇವೆ’ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ರವೀಂದ್ರ ಹೇಳಿದರು.</p>.<p>‘ಗುತ್ತಿಗೆದಾರರು ಆ.7ರಿಂದ ಕಾಮಗಾರಿಗಳನ್ನು ಸ್ಥಗಿತ ಮಾಡಿ ಹೋರಾಟ ಮಾಡುತ್ತಿದ್ದೇವೆ. ಆದರೆ ಬಿಬಿಎಂಪಿ ಮುಖ್ಯ ಆಯುಕ್ತರು ಜುಲೈ 18ರಂದು ಬಿಡುಗಡೆ ಮಾಡಿರುವ ಹಣವನ್ನು ಇದೀಗ ಬಿಡುಗಡೆ ಮಾಡಿರುವಂತೆ ಮಾತನಾಡುತ್ತಿರುವುದು ಸರಿಯಲ್ಲ’ ಎಂದು ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದರೆ ಕೂಡಲೇ ಟ್ಯಾಂಕರ್ಗಳ ಮೂಲಕ ನೀರು ಪೂರೈಸಲು ಸೂಚಿಸಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.</p>.<p>110 ಹಳ್ಳಿಗಳಿಗೆ ಮಾತ್ರ ಕುಡಿಯುವ ನೀರಿನ ಪೂರೈಕೆ ಜವಾಬ್ದಾರಿ ಬಿಬಿಎಂಪಿಗಿರುವುದು. ಆದ್ದರಿಂದ, ಕೊಳವೆಬಾವಿ ಕೊರೆಯುವುದು ತಡವಾದರೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಇದಕ್ಕೆ ಟ್ರ್ಯಾಕರ್ ಹಾಕಿ ನೀರು ಅಗತ್ಯವಿರುವವರಿಗೆ ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ವಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.</p>.<p>ತುರ್ತು ಸಂದರ್ಭದಲ್ಲಿ ಕಾಮಗಾರಿಗಾಗಿ ₹10 ಕೋಟಿಗೆ ಅನುಮೋದನೆ ದೊರೆತಿದೆ. ಈ ಅನುದಾನದಲ್ಲಿ ಕೊಳವೆಬಾವಿ ಕೊರೆಸಲಾಗುವುದು. ಅಗತ್ಯವಿರುವ ಕಡೆ ಅದಕ್ಕೆ ಅನುಮತಿ ಪಡೆದುಕೊಂಡು ಮುಂದುವರಿಯಬೇಕಿದೆ. ಮಹದೇಪುರ ಕ್ಷೇತ್ರದವರು ಹೆಚ್ಚಿನ ಹಣ ಕೇಳಿದ್ದು, ಅನುಮೋದನೆಗೆ ಕಳುಹಿಸಲಾಗಿದೆ. ಒಪ್ಪಿಗೆ ಸಿಕ್ಕ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.</p>.<p><strong>₹44 ಕೋಟಿ ಬಿಡುಗಡೆ </strong></p><p>₹25 ಲಕ್ಷಕ್ಕೂ ಕಡಿಮೆ ಮೊತ್ತ ಬಿಲ್ಗಳನ್ನು 2021ರ ಮೇ, ಜೂನ್, ಜುಲೈ ಬಾಬ್ತಿನಲ್ಲಿ ಗುತ್ತಿಗೆದಾರರಿಗೆ ಜುಲೈ 18ರಂದು ‘ಹಣ ಭರವಸೆ ಪತ್ರ’ ಮೂಲಕ ಒಟ್ಟು ₹44.33 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತುಷಾರ್ ಗಿರಿನಾಥ್ ತಿಳಿಸಿದರು.</p>.<p>ಕಾಮಗಾರಿಗಳಿಗೆ ಸಂಬಂಧಿಸಿದ ಬಿಲ್ಲುಗಳ ನೈಜತೆ ಪರಿಶೀಲಿಸಿಕೊಂಡು ನಿಯಮಾನುಸಾರ ಬಿಡುಗಡೆ ಮಾಡಲಾಗಿದೆ. ಒಬ್ಬರಿಗೆ ಗರಿಷ್ಠ ಮೂರು ಬಿಲ್ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.</p>.<p>ಎಸ್ಐಟಿ ತನಿಖೆ ಪೂರ್ಣಗೊಂಡ ಮೇಲೆ ಅದರನುಸಾರ ಮುಂದಿನ ಬಿಲ್ಗಳನ್ನು ಪಾವತಿ ಮಾಡಲಾಗುತ್ತದೆ ಎಂದರು.</p>.<p><strong>ಮೊದಲೇ ನೀಡಿದ್ದರು </strong></p><p>‘ಹಣ ಭರವಸೆ ಪತ್ರ’ವನ್ನು ₹25 ಲಕ್ಷಕ್ಕೂ ಕಡಿಮೆ ಮೊತ್ತ ಬಿಲ್ಗಳಿಗೆ ಜುಲೈ 18ರಂದೇ ಬಿಡುಗಡೆ ಮಾಡಲಾಗಿದೆ. ಎಲ್ಲ ಗುತ್ತಿಗೆದಾರರಿಗೆ ಬಾಕಿ ಇರುವ ₹675 ಕೋಟಿ ಹಾಗೂ ₹2,500 ಕೋಟಿ ಹಣ ಬಿಡುಗಡೆ ಮಾಡಿ ಎಂದು ನಾವು ಕೇಳುತ್ತಿದ್ದೇವೆ’ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ರವೀಂದ್ರ ಹೇಳಿದರು.</p>.<p>‘ಗುತ್ತಿಗೆದಾರರು ಆ.7ರಿಂದ ಕಾಮಗಾರಿಗಳನ್ನು ಸ್ಥಗಿತ ಮಾಡಿ ಹೋರಾಟ ಮಾಡುತ್ತಿದ್ದೇವೆ. ಆದರೆ ಬಿಬಿಎಂಪಿ ಮುಖ್ಯ ಆಯುಕ್ತರು ಜುಲೈ 18ರಂದು ಬಿಡುಗಡೆ ಮಾಡಿರುವ ಹಣವನ್ನು ಇದೀಗ ಬಿಡುಗಡೆ ಮಾಡಿರುವಂತೆ ಮಾತನಾಡುತ್ತಿರುವುದು ಸರಿಯಲ್ಲ’ ಎಂದು ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>