ಈ ಕುರಿತು ಸುತ್ತೋಲೆ ಹೊರಡಿಸಿರುವ ಪಾಲಿಕೆಯ ವಿಶೇಷ ಆಯುಕ್ತ (ಆರೋಗ್ಯ) ಡಿ.ರಂದೀಪ್, ‘ಹಲವು ಪೌರಕಾರ್ಮಿಕರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಕೋವಿಡ್ ಲಕ್ಷಣಗಳಿರುವ ಹಾಗೂ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತಿತರ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ ಪೌರಕಾರ್ಮಿಕರನ್ನು ಆದ್ಯತೆ ಮೇರೆಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಕೆಲಸದ ವೇಳೆಯೇ ಆರೋಗ್ಯ ಕೇಂದ್ರಗಳಲ್ಲಿ ಹಂತ ಹಂತವಾಗಿ ಅವರಿಗೆ ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆ ನಡೆಸಲು ಸಂಬಂಧ ಪಟ್ಟ ಆರೋಗ್ಯ ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದ್ದಾರೆ.