‘ರೋಗ ತರುವ ವೈರಾಣುವಿಗೆ ಪ್ರತಿರೋಧ ತೋರಿಸಲು ಎಷ್ಟರ ಮಟ್ಟಿಗೆ ದೇಹವು ಸಜ್ಜಾಗಿದೆ, ಪ್ರತಿಕಾಯಗಳ ತೀವ್ರತೆ ಎಷ್ಟಿದೆ ಎಂಬುದು ಈ ಸಮೀಕ್ಷೆಯಿಂದ ತಿಳಿಯುತ್ತದೆ. ಇದರಲ್ಲಿ ಎಷ್ಟು ಜನರಿಗೆ ಸೋಂಕು ಬಂದಿದೆ, ಎಷ್ಟು ಜನರಿಗೆ ಸೋಂಕು ತಗುಲಿಲ್ಲ, ಎಷ್ಟು ಜನರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿದೆ ಎನ್ನುವ ಅಂಶಗಳನ್ನೂ ವಿಶ್ಲೇಷಿಸಲಾಗುತ್ತದೆ. ಈ ಸಮೀಕ್ಷೆಯ ವರದಿ ಆಧರಿಸಿ ಮುಂದಿನ ದಿನಗಳಲ್ಲಿ ಸೋಂಕು ಹರಡದಂತೆ ತಡೆಯುವ ಕುರಿತು ನಿಯಮಗಳನ್ನು ರೂಪಿಸಲಾಗುತ್ತದೆ’ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.