<p><strong>ಬೆಂಗಳೂರು</strong>: ನಗರದ ನಿವಾಸಿಗಳಲ್ಲಿ ಎಷ್ಟು ಪ್ರಮಾಣದಲ್ಲಿ ರೋಗ ನಿರೋಧಕ ಶಕ್ತಿ ಬೆಳೆದಿದೆ ಎಂಬುದನ್ನು ಪತ್ತೆಹಚ್ಚಲು ಸೆರೊ ಸಮೀಕ್ಷೆ ನಡೆಸಲು ಬಿಬಿಎಂಪಿ ನಿರ್ಧರಿಸಿದೆ.</p>.<p>ಲಸಿಕೆ ಪಡೆದವರಲ್ಲಿ ಹಾಗೂ ಲಸಿಕೆ ಪಡೆಯದವರಲ್ಲಿ ಕೊರೊನಾ ವೈರಾಣುವಿನ ವಿರುದ್ಧ ಎಷ್ಟರಮಟ್ಟಿದೆ ಪ್ರತಿಕಾಯಗಳು ಸೃಷ್ಟಿ ಯಾಗಿವೆ ಎಂಬುದನ್ನು ಪತ್ತೆ ಹಚ್ಚಲು ನೆರವಾಗುವ ಈ ಸಮಿಕ್ಷೆಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಬುಧವಾರ ಚಾಲನೆ ನೀಡಿದರು.</p>.<p>ಸೆರೊ ಸಮೀಕ್ಷೆಯಡಿ ನಗರದ 2 ಸಾವಿರ ನಿವಾಸಿಗಳ ರಕ್ತದ ದ್ರವ ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಅಧ್ಯಯನಕ್ಕೆ ಒಳಪಡಿಸಲಾಗುತ್ತದೆ. ಸಮೀಕ್ಷೆಗೆ ಒಳಪಡಿಸಲಾಗುವವರನ್ನು 18 ವರ್ಷದೊಳಗಿನವರು, 18 ರಿಂದ 45 ವರ್ಷಗಳ ಒಳಗಿನವರು ಹಾಗೂ 45 ವರ್ಷ ಮೇಲಿನವರು ಎಂದು ಮೂರು ಗುಂಪುಗಳನ್ನಾಗಿ ವರ್ಗೀಕರಿಸಲಾಗುತ್ತದೆ. 2 ಸಾವಿರ ಮಂದಿಯಲ್ಲಿ 18 ವರ್ಷಗಳ ಒಳಗಿನ ಶೇ 30ರಷ್ಟು ಮಂದಿ, 18 ವರ್ಷಗಳಿಂದ 45 ವರ್ಷಗಳ ಒಳಗಿನವರು ಶೇ 50ರಷ್ಟು ಮಂದಿ ಹಾಗೂ 45 ವರ್ಷ ಮೇಲ್ಪಟ್ಟ ಶೇ 20ರಷ್ಟು ಮಂದಿ ಇರುತ್ತಾರೆ. ಲಸಿಕೆ ಪಡೆದ ಹಾಗೂ ಲಸಿಕೆ ಪಡೆಯದ ತಲಾ 1 ಸಾವಿರ ಮಂದಿ ಸಮೀಕ್ಷೆಗೆ ಒಳಗಾಗಲಿ ದ್ದಾರೆ. ಅವರ ರಕ್ತದ ದ್ರವ (ಸೀರಂ) ಸಂಗ್ರಹಿಸಿ ಅವರಲ್ಲಿ ಎಷ್ಟು ಪ್ರಮಾಣದಲ್ಲಿ ಪ್ರತಿಕಾಯಗಳು ಪತ್ತೆಯಾಗಿವೆ ಎಂಬುದನ್ನು ಪರೀಕ್ಷೆ ಮಾಡಲಾಗುತ್ತದೆ.</p>.<p>ಆಯಾ ವಲಯದ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು, ಆರೋಗ್ಯಾಧಿಕಾರಿ ಗಳು ಮತ್ತು ಆರೋಗ್ಯ ವೈದ್ಯಾಧಿಕಾರಿಗಳು ಪರಸ್ಪರ ಸಮಾಲೋಚನೆ ನಡೆಸಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ತಂಡಗಳನ್ನು ರಚಿಸಲಿದ್ದಾರೆ. ಈ ತಂಡ ಸೆರೊ ಸಮೀಕ್ಷೆ ಕೈಗೊಳ್ಳಲಿದೆ. ಈ ಸಲುವಾಗಿ ಪಾಲಿಕೆಯ ಕಿರಿಯ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ಪ್ರಯೋಗಾಲಯ ತಂತ್ರಜ್ಞರ ಕಾರ್ಯಪಡೆಗಳನ್ನು ರಚಿಸ ಲಾಗಿದೆ. ಈ ತಂಡ ಗಳ ಸದಸ್ಯರು ಮನೆ-ಮನೆಗೆ ತೆರಳಿ ಗುರುತಿ ಸುವ ವ್ಯಕ್ತಿಗಳಿಂದ ರಕ್ತದ ಮಾದರಿ ಮತ್ತು ಗಂಟಲಿನ ದ್ರವ ಸಂಗ್ರಹಿಸಲಾಗುತ್ತದೆ.</p>.<p>ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಇಂತಿಷ್ಟು ಮಂದಿಗೆ ಸಮೀಕ್ಷೆ ನಡೆಸಬೇಕೆಂದು ಗುರಿ ಗೊತ್ತುಪಡಿಸಲಾಗಿದೆ. ವಾರದೊಳಗೆ ಸೆರೊ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತರು ಸೂಚಿಸಿದ್ದಾರೆ.</p>.<p>-0-</p>.<p class="Briefhead">‘ಸೋಂಕು ನಿಯಂತ್ರಣಕ್ಕೆ ನೆರವಾಗಲಿದೆ ಸೆರೊ ಸಮೀಕ್ಷೆ’</p>.<p>‘ರೋಗ ತರುವ ವೈರಾಣುವಿಗೆ ಪ್ರತಿರೋಧ ತೋರಿಸಲು ಎಷ್ಟರ ಮಟ್ಟಿಗೆ ದೇಹವು ಸಜ್ಜಾಗಿದೆ, ಪ್ರತಿಕಾಯಗಳ ತೀವ್ರತೆ ಎಷ್ಟಿದೆ ಎಂಬುದು ಈ ಸಮೀಕ್ಷೆಯಿಂದ ತಿಳಿಯುತ್ತದೆ. ಇದರಲ್ಲಿ ಎಷ್ಟು ಜನರಿಗೆ ಸೋಂಕು ಬಂದಿದೆ, ಎಷ್ಟು ಜನರಿಗೆ ಸೋಂಕು ತಗುಲಿಲ್ಲ, ಎಷ್ಟು ಜನರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿದೆ ಎನ್ನುವ ಅಂಶಗಳನ್ನೂ ವಿಶ್ಲೇಷಿಸಲಾಗುತ್ತದೆ. ಈ ಸಮೀಕ್ಷೆಯ ವರದಿ ಆಧರಿಸಿ ಮುಂದಿನ ದಿನಗಳಲ್ಲಿ ಸೋಂಕು ಹರಡದಂತೆ ತಡೆಯುವ ಕುರಿತು ನಿಯಮಗಳನ್ನು ರೂಪಿಸಲಾಗುತ್ತದೆ’ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ನಿವಾಸಿಗಳಲ್ಲಿ ಎಷ್ಟು ಪ್ರಮಾಣದಲ್ಲಿ ರೋಗ ನಿರೋಧಕ ಶಕ್ತಿ ಬೆಳೆದಿದೆ ಎಂಬುದನ್ನು ಪತ್ತೆಹಚ್ಚಲು ಸೆರೊ ಸಮೀಕ್ಷೆ ನಡೆಸಲು ಬಿಬಿಎಂಪಿ ನಿರ್ಧರಿಸಿದೆ.</p>.<p>ಲಸಿಕೆ ಪಡೆದವರಲ್ಲಿ ಹಾಗೂ ಲಸಿಕೆ ಪಡೆಯದವರಲ್ಲಿ ಕೊರೊನಾ ವೈರಾಣುವಿನ ವಿರುದ್ಧ ಎಷ್ಟರಮಟ್ಟಿದೆ ಪ್ರತಿಕಾಯಗಳು ಸೃಷ್ಟಿ ಯಾಗಿವೆ ಎಂಬುದನ್ನು ಪತ್ತೆ ಹಚ್ಚಲು ನೆರವಾಗುವ ಈ ಸಮಿಕ್ಷೆಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಬುಧವಾರ ಚಾಲನೆ ನೀಡಿದರು.</p>.<p>ಸೆರೊ ಸಮೀಕ್ಷೆಯಡಿ ನಗರದ 2 ಸಾವಿರ ನಿವಾಸಿಗಳ ರಕ್ತದ ದ್ರವ ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಅಧ್ಯಯನಕ್ಕೆ ಒಳಪಡಿಸಲಾಗುತ್ತದೆ. ಸಮೀಕ್ಷೆಗೆ ಒಳಪಡಿಸಲಾಗುವವರನ್ನು 18 ವರ್ಷದೊಳಗಿನವರು, 18 ರಿಂದ 45 ವರ್ಷಗಳ ಒಳಗಿನವರು ಹಾಗೂ 45 ವರ್ಷ ಮೇಲಿನವರು ಎಂದು ಮೂರು ಗುಂಪುಗಳನ್ನಾಗಿ ವರ್ಗೀಕರಿಸಲಾಗುತ್ತದೆ. 2 ಸಾವಿರ ಮಂದಿಯಲ್ಲಿ 18 ವರ್ಷಗಳ ಒಳಗಿನ ಶೇ 30ರಷ್ಟು ಮಂದಿ, 18 ವರ್ಷಗಳಿಂದ 45 ವರ್ಷಗಳ ಒಳಗಿನವರು ಶೇ 50ರಷ್ಟು ಮಂದಿ ಹಾಗೂ 45 ವರ್ಷ ಮೇಲ್ಪಟ್ಟ ಶೇ 20ರಷ್ಟು ಮಂದಿ ಇರುತ್ತಾರೆ. ಲಸಿಕೆ ಪಡೆದ ಹಾಗೂ ಲಸಿಕೆ ಪಡೆಯದ ತಲಾ 1 ಸಾವಿರ ಮಂದಿ ಸಮೀಕ್ಷೆಗೆ ಒಳಗಾಗಲಿ ದ್ದಾರೆ. ಅವರ ರಕ್ತದ ದ್ರವ (ಸೀರಂ) ಸಂಗ್ರಹಿಸಿ ಅವರಲ್ಲಿ ಎಷ್ಟು ಪ್ರಮಾಣದಲ್ಲಿ ಪ್ರತಿಕಾಯಗಳು ಪತ್ತೆಯಾಗಿವೆ ಎಂಬುದನ್ನು ಪರೀಕ್ಷೆ ಮಾಡಲಾಗುತ್ತದೆ.</p>.<p>ಆಯಾ ವಲಯದ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು, ಆರೋಗ್ಯಾಧಿಕಾರಿ ಗಳು ಮತ್ತು ಆರೋಗ್ಯ ವೈದ್ಯಾಧಿಕಾರಿಗಳು ಪರಸ್ಪರ ಸಮಾಲೋಚನೆ ನಡೆಸಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ತಂಡಗಳನ್ನು ರಚಿಸಲಿದ್ದಾರೆ. ಈ ತಂಡ ಸೆರೊ ಸಮೀಕ್ಷೆ ಕೈಗೊಳ್ಳಲಿದೆ. ಈ ಸಲುವಾಗಿ ಪಾಲಿಕೆಯ ಕಿರಿಯ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ಪ್ರಯೋಗಾಲಯ ತಂತ್ರಜ್ಞರ ಕಾರ್ಯಪಡೆಗಳನ್ನು ರಚಿಸ ಲಾಗಿದೆ. ಈ ತಂಡ ಗಳ ಸದಸ್ಯರು ಮನೆ-ಮನೆಗೆ ತೆರಳಿ ಗುರುತಿ ಸುವ ವ್ಯಕ್ತಿಗಳಿಂದ ರಕ್ತದ ಮಾದರಿ ಮತ್ತು ಗಂಟಲಿನ ದ್ರವ ಸಂಗ್ರಹಿಸಲಾಗುತ್ತದೆ.</p>.<p>ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಇಂತಿಷ್ಟು ಮಂದಿಗೆ ಸಮೀಕ್ಷೆ ನಡೆಸಬೇಕೆಂದು ಗುರಿ ಗೊತ್ತುಪಡಿಸಲಾಗಿದೆ. ವಾರದೊಳಗೆ ಸೆರೊ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತರು ಸೂಚಿಸಿದ್ದಾರೆ.</p>.<p>-0-</p>.<p class="Briefhead">‘ಸೋಂಕು ನಿಯಂತ್ರಣಕ್ಕೆ ನೆರವಾಗಲಿದೆ ಸೆರೊ ಸಮೀಕ್ಷೆ’</p>.<p>‘ರೋಗ ತರುವ ವೈರಾಣುವಿಗೆ ಪ್ರತಿರೋಧ ತೋರಿಸಲು ಎಷ್ಟರ ಮಟ್ಟಿಗೆ ದೇಹವು ಸಜ್ಜಾಗಿದೆ, ಪ್ರತಿಕಾಯಗಳ ತೀವ್ರತೆ ಎಷ್ಟಿದೆ ಎಂಬುದು ಈ ಸಮೀಕ್ಷೆಯಿಂದ ತಿಳಿಯುತ್ತದೆ. ಇದರಲ್ಲಿ ಎಷ್ಟು ಜನರಿಗೆ ಸೋಂಕು ಬಂದಿದೆ, ಎಷ್ಟು ಜನರಿಗೆ ಸೋಂಕು ತಗುಲಿಲ್ಲ, ಎಷ್ಟು ಜನರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿದೆ ಎನ್ನುವ ಅಂಶಗಳನ್ನೂ ವಿಶ್ಲೇಷಿಸಲಾಗುತ್ತದೆ. ಈ ಸಮೀಕ್ಷೆಯ ವರದಿ ಆಧರಿಸಿ ಮುಂದಿನ ದಿನಗಳಲ್ಲಿ ಸೋಂಕು ಹರಡದಂತೆ ತಡೆಯುವ ಕುರಿತು ನಿಯಮಗಳನ್ನು ರೂಪಿಸಲಾಗುತ್ತದೆ’ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>