ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಅವರಿಗೆ ಪತ್ರ ಮಂಗಳವಾರ ಬರೆದಿರುವ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ‘ಸದ್ಯಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಬಿಡುಗಡೆ ಮಾಡಿರುವ ₹ 300 ಕೋಟಿಯಲ್ಲಿ ₹25 ಕೋಟಿಯನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ನಂತರ ಇದರ ಮರುಪಾವತಿಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ಸೂಚಿಸಿದ್ದಾರೆ. ಎಷ್ಟು ಜನರಿಗೆ ಊಟ ವಿತರಿಸಲಾಗಿದೆ ಎಂಬ ಬಗ್ಗೆ ವಿವರಗಳನ್ನು ನಿರ್ವಹಿಸಬೇಕು ಎಂದೂ ಸೂಚಿಸಿದ್ದಾರೆ.