<p><strong>ಬೆಂಗಳೂರು: </strong>ರಾಜ್ಯದಲ್ಲಿ ಇದೇ 24ರವರೆಗೆ ಲಾಕ್ಡೌನ್ ಘೋಷಿಸಿರುವ ಕಾರಣ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್ಗಳಲ್ಲಿ ಮಂಗಳವಾರದಿಂದಲೇ ದಿನದ ಮೂರು ಹೊತ್ತು ಉಚಿತ ಆಹಾರ ವಿತರಿಸಲಾಗುತ್ತದೆ.</p>.<p>ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟಗಳನ್ನು ಉಚಿತವಾಗಿ ವಿತರಿಸುವಂತೆ ಪೌರಾಡಳಿತ ನಿರ್ದೇಶಕರು ಹೊರಡಿಸಿದ ಆದೇಶದಲ್ಲಿ ಸೂಚಿಸಿದ್ದಾರೆ.</p>.<p>ಲಾಕ್ಡೌನ್ ದಿನಗಳಲ್ಲಿ ನಿರಾಶ್ರಿತರಿಗೆ ಆಹಾರ ಕಿಟ್ ಮತ್ತು ಆಹಾರ ಪದಾರ್ಥಗಳ ಕಿಟ್ಗಳನ್ನು ನೀಡುವ ಕುರಿತಂತೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ವಿಡಿಯೊ ಸಂವಾದ ನಡೆದಿತ್ತು.</p>.<p>ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರ ದುರ್ಬಲ ವರ್ಗದವರಿಗೆ ಅನುಕೂಲ ಮಾಡಿಕೊಡಲು ಸ್ಥಳೀಯ ಸಂಸ್ಥೆಗಳಲ್ಲಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತವಾಗಿ ಆಹಾರ ವಿತರಿಸಲು ಈ ವಿಡಿಯೊ ಸಂವಾದದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.</p>.<p>ಅದರಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದ್ದಾರೆ.</p>.<p class="Briefhead"><strong>ಬಾಕಿ ಬಿಲ್ ಪಾವತಿಗೆ ₹ 25 ಕೋಟಿ</strong></p>.<p class="Briefhead">ಇಂದಿರಾ ಕ್ಯಾಂಟೀನ್ಗಳಿಗೆ ಆಹಾರ ಪೂರೈಸುವ ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿರುವ ಬಿಲ್ ಪಾವತಿಗೆ ₹ 25 ಕೋಟಿ ಮೊತ್ತವನ್ನು ಈಗಾಗಲೇ ಬಿಡುಗಡೆ ಮಾಡಿರುವ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಬಳಸುವಂತೆ ಸರ್ಕಾರ ಬಿಬಿಎಂಪಿಗೆ ಸೂಚಿಸಿದೆ.</p>.<p>ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಅವರಿಗೆ ಪತ್ರ ಮಂಗಳವಾರ ಬರೆದಿರುವ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ‘ಸದ್ಯಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಬಿಡುಗಡೆ ಮಾಡಿರುವ ₹ 300 ಕೋಟಿಯಲ್ಲಿ ₹25 ಕೋಟಿಯನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ನಂತರ ಇದರ ಮರುಪಾವತಿಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ಸೂಚಿಸಿದ್ದಾರೆ. ಎಷ್ಟು ಜನರಿಗೆ ಊಟ ವಿತರಿಸಲಾಗಿದೆ ಎಂಬ ಬಗ್ಗೆ ವಿವರಗಳನ್ನು ನಿರ್ವಹಿಸಬೇಕು ಎಂದೂ ಸೂಚಿಸಿದ್ದಾರೆ.</p>.<p><a href="https://www.prajavani.net/karnataka-news/karnataka-chief-minister-b-s-yediyurappa-directed-authorities-to-evict-more-than-800-patients-who-829698.html" itemprop="url">ಕೋವಿಡ್:20-30 ದಿನಗಳಿಂದ ಆಸ್ಪತ್ರೆಯಲ್ಲಿ, 800 ಮಂದಿ ಡಿಸ್ಚಾರ್ಜ್ಗೆ ಸಿಎಂ ಸೂಚನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಇದೇ 24ರವರೆಗೆ ಲಾಕ್ಡೌನ್ ಘೋಷಿಸಿರುವ ಕಾರಣ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್ಗಳಲ್ಲಿ ಮಂಗಳವಾರದಿಂದಲೇ ದಿನದ ಮೂರು ಹೊತ್ತು ಉಚಿತ ಆಹಾರ ವಿತರಿಸಲಾಗುತ್ತದೆ.</p>.<p>ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟಗಳನ್ನು ಉಚಿತವಾಗಿ ವಿತರಿಸುವಂತೆ ಪೌರಾಡಳಿತ ನಿರ್ದೇಶಕರು ಹೊರಡಿಸಿದ ಆದೇಶದಲ್ಲಿ ಸೂಚಿಸಿದ್ದಾರೆ.</p>.<p>ಲಾಕ್ಡೌನ್ ದಿನಗಳಲ್ಲಿ ನಿರಾಶ್ರಿತರಿಗೆ ಆಹಾರ ಕಿಟ್ ಮತ್ತು ಆಹಾರ ಪದಾರ್ಥಗಳ ಕಿಟ್ಗಳನ್ನು ನೀಡುವ ಕುರಿತಂತೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ವಿಡಿಯೊ ಸಂವಾದ ನಡೆದಿತ್ತು.</p>.<p>ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರ ದುರ್ಬಲ ವರ್ಗದವರಿಗೆ ಅನುಕೂಲ ಮಾಡಿಕೊಡಲು ಸ್ಥಳೀಯ ಸಂಸ್ಥೆಗಳಲ್ಲಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತವಾಗಿ ಆಹಾರ ವಿತರಿಸಲು ಈ ವಿಡಿಯೊ ಸಂವಾದದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.</p>.<p>ಅದರಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದ್ದಾರೆ.</p>.<p class="Briefhead"><strong>ಬಾಕಿ ಬಿಲ್ ಪಾವತಿಗೆ ₹ 25 ಕೋಟಿ</strong></p>.<p class="Briefhead">ಇಂದಿರಾ ಕ್ಯಾಂಟೀನ್ಗಳಿಗೆ ಆಹಾರ ಪೂರೈಸುವ ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿರುವ ಬಿಲ್ ಪಾವತಿಗೆ ₹ 25 ಕೋಟಿ ಮೊತ್ತವನ್ನು ಈಗಾಗಲೇ ಬಿಡುಗಡೆ ಮಾಡಿರುವ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಬಳಸುವಂತೆ ಸರ್ಕಾರ ಬಿಬಿಎಂಪಿಗೆ ಸೂಚಿಸಿದೆ.</p>.<p>ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಅವರಿಗೆ ಪತ್ರ ಮಂಗಳವಾರ ಬರೆದಿರುವ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ‘ಸದ್ಯಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಬಿಡುಗಡೆ ಮಾಡಿರುವ ₹ 300 ಕೋಟಿಯಲ್ಲಿ ₹25 ಕೋಟಿಯನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ನಂತರ ಇದರ ಮರುಪಾವತಿಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ಸೂಚಿಸಿದ್ದಾರೆ. ಎಷ್ಟು ಜನರಿಗೆ ಊಟ ವಿತರಿಸಲಾಗಿದೆ ಎಂಬ ಬಗ್ಗೆ ವಿವರಗಳನ್ನು ನಿರ್ವಹಿಸಬೇಕು ಎಂದೂ ಸೂಚಿಸಿದ್ದಾರೆ.</p>.<p><a href="https://www.prajavani.net/karnataka-news/karnataka-chief-minister-b-s-yediyurappa-directed-authorities-to-evict-more-than-800-patients-who-829698.html" itemprop="url">ಕೋವಿಡ್:20-30 ದಿನಗಳಿಂದ ಆಸ್ಪತ್ರೆಯಲ್ಲಿ, 800 ಮಂದಿ ಡಿಸ್ಚಾರ್ಜ್ಗೆ ಸಿಎಂ ಸೂಚನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>