ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಧಿಕೃತ ಜಾಹೀರಾತು: ಆರೋಗ್ಯ ಇಲಾಖೆ ವಿರುದ್ಧ ಪಾಲಿಕೆ ದೂರು

Last Updated 29 ಆಗಸ್ಟ್ 2020, 20:09 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಮೇಖ್ರಿ ವೃತ್ತದಲ್ಲಿ ಆರೋಗ್ಯ ಇಲಾಖೆ ಹಾಗೂ ವಿವಿಧ ಸಂಘ–ಸಂಸ್ಥೆಗಳು ಅನಧಿಕೃತವಾಗಿ ಅಳವಡಿಸಿದ್ದ ಜಾಹೀರಾತು ಫಲಕಗಳನ್ನು ತೆರವುಗೊಳಿಸಿದ ಬಿಬಿಎಂಪಿ ಅಧಿಕಾರಿಗಳು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಪಾಲಿಕೆ ಅನುಮತಿ ಪಡೆಯದೆಯೇ ಟ್ರುಪ್ಲೋ ಬೈ ಹಿಂದ್ ವೇರ್, ಎ–ವನ್ ಗೋಲ್ಡ್‌ ಮತ್ತು ಆರೋಗ್ಯ ಇಲಾಖೆಯು ಜಾಹೀರಾತು ಫಲಕವನ್ನು ಅಳವಡಿಸಿದೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಸದಾಶಿವನಗರ ಪೊಲೀಸ್ ಠಾಣೆಗೆ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿ ರೂಪಾ ದೂರು ನೀಡಿದ್ದಾರೆ.

‘ಪಾಲಿಕೆ ವ್ಯಾಪ್ತಿಯಲ್ಲಿ ಯಾರೇ ಜಾಹೀರಾತು ಫಲಕ ಅಳವಡಿಸಬೇಕಿದ್ದರೂ ಬಿಬಿಎಂಪಿ ಅನುಮತಿ ಪಡೆಯುವುದು ಕಡ್ಡಾಯ. ಅನುಮತಿ ಪಡೆಯದೆ ಅಳವಡಿಸಿದ್ದರಿಂದ ಮೇಲಾಧಿಕಾರಿಗಳ ಸೂಚನೆಯಂತೆ ತೆರವುಗೊಳಿಸಿ ದೂರು ನೀಡಲಾಗಿದೆ’ ಎಂದು ರೂಪಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT