ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿ.ಶ್ರೀನಿಧಿ, ‘ಈಗಾಗಲೇ ವಾರ್ಡ್ಗಳ ಪುನರ್ ವಿಂಗಡಣೆ ಕುರಿತ ಕರಡು ಅಧಿಸೂಚನೆ ಪ್ರಕಟಿಸಸಲಾಗಿದೆ. ಸಾರ್ವಜನಿಕ ಆಕ್ಷೇಪಣೆಗೆ 15 ದಿನ ಕಾಲಾವಕಾಶ ನೀಡಲಾಗಿದೆ. ನಂತರ ಅಂತಿಮಗೊಳಿಸಲಾಗುವುದು. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಾರ್ಡ್ವಾರು ಮೀಸಲು ಪಟ್ಟಿ ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.