ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ: ವಾರ್ಡ್‌ ಪುನರ್ ವಿಂಗಡಣೆ ಕರಡು ಸಲ್ಲಿಕೆ

Last Updated 4 ಮಾರ್ಚ್ 2020, 20:14 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವಾರ್ಡ್ ಪುನರ್ ವಿಂಗಡಣೆ ಕುರಿತು ಹೊರಡಿಸಿರುವ ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸಲ್ಲಿಸಿದೆ.

‘ಬಿಬಿಎಂಪಿಗೆ ಸಕಾಲದಲ್ಲಿ ಚುನಾವಣೆ ನಡೆಸುವ ದಿಸೆಯಲ್ಲಿ ವಾರ್ಡ್ ಪುನರ್ ವಿಂಗಡಣೆ ಮತ್ತು ಮೀಸಲು ಪಟ್ಟಿ ನೀಡುವಂತೆ ನಿರ್ದೇಶಿಸಬೇಕು’ ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿ.ಶ್ರೀನಿಧಿ, ‘ಈಗಾಗಲೇ ವಾರ್ಡ್‌ಗಳ ಪುನರ್ ವಿಂಗಡಣೆ ಕುರಿತ ಕರಡು ಅಧಿಸೂಚನೆ ಪ್ರಕಟಿಸಸಲಾಗಿದೆ. ಸಾರ್ವಜನಿಕ ಆಕ್ಷೇಪಣೆಗೆ 15 ದಿನ ಕಾಲಾವಕಾಶ ನೀಡಲಾಗಿದೆ. ನಂತರ ಅಂತಿಮಗೊಳಿಸಲಾಗುವುದು. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಾರ್ಡ್‌ವಾರು ಮೀಸಲು ಪಟ್ಟಿ ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಇದಕ್ಕೆ ನ್ಯಾಯಪೀಠ, ‘ವಾರ್ಡ್ ಪುನರ್ ವಿಂಗಡಣೆ ಮತ್ತು ಮೀಸಲು ನಿಗದಿಯನ್ನು ಕಾಲಮಿತಿಯಲ್ಲಿ ಮಾಡಬೇಕು. ಏಪ್ರಿಲ್ 1ರೊಳಗೆ ಮೀಸಲು ಪಟ್ಟಿ ನೀಡಬೇಕು’ ಎಂದು ಸೂಚಿಸಿ ವಿಚಾರಣೆಯನ್ನು ಇದೇ 13ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT