ಬೆಂಗಳೂರು: ‘ಬಿಬಿಎಂಪಿ ವಾರ್ಡ್ಗಳ ಮರುವಿಂಗಡಣೆಗೆ ಸಂಬಂಧಿಸಿದ ಕರಡು ಸಿದ್ಧಪಡಿಸುತ್ತಿದ್ದೇವೆ. ಈ ಕುರಿತು ಕೆಲವು ಗೊಂದಲಗಳಿದ್ದು, ಅವುಗಳನ್ನು ಬಗೆಹರಿಸುವಂತೆ ಸರ್ಕಾರವನ್ನು ಕೋರಿದ್ದೇವೆ. ಸರ್ಕಾರದ ನಿರ್ದೇಶನ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.