<p><strong>ಬೆಂಗಳೂರು: </strong>ಬಿಬಿಎಂಪಿಯ 45 ವಾರ್ಡ್ಗಳ ಕಸ ನಿರ್ವಹಣೆ ಟೆಂಡರ್ನಲ್ಲಿ ಅರ್ಹತೆ ಗಳಿಸಿ, ಒಪ್ಪಿಗೆ ಪತ್ರವನ್ನು ಪಡೆದುಕೊಂಡಿರುವ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ಬಿಬಿಎಂಪಿ ನಿರ್ಧರಿಸಿದೆ.</p>.<p>ಬಿಬಿಎಂಪಿ ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆ 2019ರ ಮೇನಲ್ಲೇ ಪೂರ್ಣಗೊಂಡಿದೆ. 45 ವಾರ್ಡ್ಗಳಲ್ಲಿ ಕಸ ವಿಲೇವಾರಿಗೆ ಅರ್ಹತೆ ಪಡೆದ ಗುತ್ತಿಗೆದಾರರಿಗೆ ಪಾಲಿಕೆ ಇನ್ನೂ ಕಾರ್ಯಾದೇಶ ನೀಡಿರಲಿಲ್ಲ.</p>.<p>ಒಪ್ಪಿಗೆ ಪತ್ರ ನೀಡಿರುವ ಗುತ್ತಿಗೆದಾರರಿಗೆ 2 ವಾರದೊಳಗೆ ಕಾರ್ಯಾದೇಶ ನೀಡುವಂತೆ ಹೈಕೋರ್ಟ್ 2020ರ ಫೆಬ್ರುವರಿಯಲ್ಲೇ ಸೂಚಿಸಿತ್ತು. ಈ ಕುರಿತ ಅರ್ಜಿ ವಿಚಾರಣೆ ಇದೇ 12ರಂದು ಬರಲಿರುವ ಹಿನ್ನೆಲೆಯಲ್ಲಿ ಕಾರ್ಯಾದೇಶ ನೀಡಲು ಮೇಯರ್ ಎಂ.ಗೌತಮ್ ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಪೂರ್ವ ವಲಯದ 30 ವಾರ್ಡ್ಗಳ ಕಸ ಸಂಗ್ರಹಣೆ ಮತ್ತು ಸಾಗಣೆ ಕುರಿತು ಹೈಕೋರ್ಟ್ನಲ್ಲಿ ಎಂಎಸ್ಜಿಪಿ ಸಂಸ್ಥೆ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಈ 30 ವಾರ್ಡ್ಗಳು ಮತ್ತು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಕಾರ್ಯಾದೇಶ ನೀಡುವುದು ಬಾಕಿ ಇರುವ ಇನ್ನುಳಿದ 105 ವಾರ್ಡ್ಗಳ ಟೆಂಡರ್ ಪ್ರಸ್ತಾವನೆಯನ್ನು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಬಿಎಂಪಿಯ 45 ವಾರ್ಡ್ಗಳ ಕಸ ನಿರ್ವಹಣೆ ಟೆಂಡರ್ನಲ್ಲಿ ಅರ್ಹತೆ ಗಳಿಸಿ, ಒಪ್ಪಿಗೆ ಪತ್ರವನ್ನು ಪಡೆದುಕೊಂಡಿರುವ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ಬಿಬಿಎಂಪಿ ನಿರ್ಧರಿಸಿದೆ.</p>.<p>ಬಿಬಿಎಂಪಿ ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆ 2019ರ ಮೇನಲ್ಲೇ ಪೂರ್ಣಗೊಂಡಿದೆ. 45 ವಾರ್ಡ್ಗಳಲ್ಲಿ ಕಸ ವಿಲೇವಾರಿಗೆ ಅರ್ಹತೆ ಪಡೆದ ಗುತ್ತಿಗೆದಾರರಿಗೆ ಪಾಲಿಕೆ ಇನ್ನೂ ಕಾರ್ಯಾದೇಶ ನೀಡಿರಲಿಲ್ಲ.</p>.<p>ಒಪ್ಪಿಗೆ ಪತ್ರ ನೀಡಿರುವ ಗುತ್ತಿಗೆದಾರರಿಗೆ 2 ವಾರದೊಳಗೆ ಕಾರ್ಯಾದೇಶ ನೀಡುವಂತೆ ಹೈಕೋರ್ಟ್ 2020ರ ಫೆಬ್ರುವರಿಯಲ್ಲೇ ಸೂಚಿಸಿತ್ತು. ಈ ಕುರಿತ ಅರ್ಜಿ ವಿಚಾರಣೆ ಇದೇ 12ರಂದು ಬರಲಿರುವ ಹಿನ್ನೆಲೆಯಲ್ಲಿ ಕಾರ್ಯಾದೇಶ ನೀಡಲು ಮೇಯರ್ ಎಂ.ಗೌತಮ್ ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಪೂರ್ವ ವಲಯದ 30 ವಾರ್ಡ್ಗಳ ಕಸ ಸಂಗ್ರಹಣೆ ಮತ್ತು ಸಾಗಣೆ ಕುರಿತು ಹೈಕೋರ್ಟ್ನಲ್ಲಿ ಎಂಎಸ್ಜಿಪಿ ಸಂಸ್ಥೆ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಈ 30 ವಾರ್ಡ್ಗಳು ಮತ್ತು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಕಾರ್ಯಾದೇಶ ನೀಡುವುದು ಬಾಕಿ ಇರುವ ಇನ್ನುಳಿದ 105 ವಾರ್ಡ್ಗಳ ಟೆಂಡರ್ ಪ್ರಸ್ತಾವನೆಯನ್ನು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>