‘44 ವಾರ್ಡ್ಗಳಲ್ಲಿ ವಾಣಿಜ್ಯ ಮಳಿಗೆಗಳು, ಹೋಟೆಲ್ಗಳು, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳು ಪರವಾನಗಿ ಇಲ್ಲದೆಯೇ ವಹಿವಾಟುಗಳನ್ನು ನಡೆಸುತ್ತಲೇ ಇವೆ. ಅವುಗಳ ಮಾಲೀಕರಿಗೆ ಪರವಾನಗಿ ಕೊಟ್ಟಿದ್ದರೆ ಪಾಲಿಕೆಗೆ ನಾಲ್ಕೈದು ಕೋಟಿಯಷ್ಟು ಆದಾಯವಾದರೂ ಬರುತ್ತಿತ್ತು. ಅದನ್ನೂ ನೀಡದ ಡಾ. ಸವಿತಾ ಅವರು, ಅಕ್ರಮವಾಗಿ ನಡೆಯುತ್ತಿರುವ ಮಳಿಗೆಗಳ ಮೇಲೆ ಕ್ರಮವನ್ನೂ ಕೈಗೊಂಡಿಲ್ಲ. ಆದ್ದರಿಂದ ಆರೋಗ್ಯ ಅಧಿಕಾರಿ ಮೇಲೆ ಕ್ರಮ ಕೈಗೊಂಡು, ಪಾಲಿಕೆಗೆ ಉಂಟಾಗಿರುವ ನಷ್ಟವನ್ನು ಅವರಿಂದ ವಸೂಲಿ ಮಾಡಬೇಕು’ ಎಂದು ಬಿಬಿಎಂಪಿಯ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್. ರಮೇಶ್ ಅವರು ಆರೋಗ್ಯ ಇಲಾಖೆಯ ವಿಶೇಷ ಆಯುಕ್ತರು ಮತ್ತು ವಲಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.