‘ಶಾಲಾ ಶಿಕ್ಷಣವು ಕೇವಲ ನಾಲ್ಕು ಗೋಡೆಗಳ ಮಧ್ಯದಲ್ಲಿ ನಡೆಯದೆ, ಹತ್ತಿರದ ಉದ್ಯಾನದಲ್ಲಿ, ಬಸ್ಸಿನಲ್ಲಿ ಮಕ್ಕಳ ವಿದ್ಯಾಭ್ಯಾಸ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪಾಲಿಕೆ ವತಿಯಿಂದ ಬಸ್ಸುಗಳನ್ನು ಒದಗಿಸಿದ್ದು, ಪ್ರತಿಯೊಂದು ಬಸ್ಸಿನಲ್ಲಿ ವಿದ್ಯಾರ್ಥಿಗಳು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿರುತ್ತದೆ. ಅಂಗನವಾಡಿಯ ಮಕ್ಕಳಿಗೆ ವಿನೂತನ ಕಲಿಕಾ ಸಾಮಗ್ರಿ, ಸಂಸ್ಥೆಯಿಂದ ನುರಿತ ಶಿಕ್ಷಕರು ಹಾಗೂ ವಿಭಿನ್ನ ವಾತಾವರಣವನ್ನು ಕಲ್ಪಿಸಿ ಅಂಗನವಾಡಿ ಮಕ್ಕಳ ಆಮೂಲಾಗ್ರ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಶಿಕ್ಷಕರಿಗೆ ತರಬೇತಿಯನ್ನು ಸಹ ನೀಡಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ಹೆಚ್ಚು ಪ್ರದೇಶಗಳಿಗೆ ವಿಸ್ತರಿಸಲಾಗುತ್ತದೆ’ ಎಂದು ತುಷಾರ್ ಗಿರಿನಾಥ್ ಹೇಳಿದರು.