ಬೆಂಗಳೂರು: ರಾಜ್ಯದಲ್ಲಿರುವ ಕೆಲವು ಕೈಗಾರಿಕಾ ಸಮೂಹಗಳು ಮೂರು ವರ್ಷಗಳಿಂದ ಎದುರಿಸುತ್ತಿರುವ ಭೂಮಿ ಗುತ್ತಿಗೆ ಪ್ರಕರಣಗಳನ್ನು ಕೂಡಲೇ ಸಕ್ರಮಗೊಳಿಸಬೇಕೆಂದು ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ (ಬಿಸಿಐಸಿ) ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
‘ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಂಡಲ್ಲಿ ಕೈಗಾರಿಕಾ ವಲಯಕ್ಕೆ ಪೆಟ್ಟುಬೀಳಲಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೈಗಾರಿಕೆಗಳು ಬಂಡವಾಳ ಹೂಡಿಕೆ ಮಾಡುವುದಿಲ್ಲ.ಇದರಿಂದ ನೆರೆಯ ರಾಜ್ಯಗಳು ಲಾಭ ಪಡೆಯಲಿವೆ’ ಎಂದುಮಂಡಳಿಯ ಅಧ್ಯಕ್ಷ ಕಿಶೋರ್ ಆಳ್ವ ತಿಳಿಸಿದ್ದಾರೆ.
‘ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯ. ಜಿಂದಾಲ್ಗೆ ಜಮೀನು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದ ಅನಗತ್ಯ. ಈ ವಿಚಾರ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿರುವುದು ವಿಷಾದಕರ’ ಎಂದಿದ್ದಾರೆ.