ಸಭೆ ನಡೆಸಿ ಕ್ರಮ: ಪ್ರತಿಭಟನಾಕಾರರ ಮನವಿ ಆಲಿಸಿದ ಸಚಿವ ಶಿವರಾಜ ತಂಗಡಗಿ ಹಾಗೂ ಜಿಲ್ಲಾಧಿಕಾರಿ ಕೆ.ಎ. ದಯಾನಂದ್, ‘ವಿಕಾಸಸೌಧದಲ್ಲಿ ಸಭೆ ನಡೆಸಲಾಗುವುದು. ಅಧಿಕಾರಿಗಳು ಹಾಗೂ ಸಂಘದ ಮುಖಂಡರ ಸಮ್ಮುಖದಲ್ಲಿ ಚರ್ಚಿಸಿ, ಬೇಡಿಕೆ ಈಡೇರಿಕೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು. ಇದಕ್ಕೆ ಒಪ್ಪಿದ ಪ್ರತಿಭಟನಕಾರರು, ಪ್ರತಿಭಟನೆ ಹಿಂಪಡೆದರು.