<p><strong>ಬೆಂಗಳೂರು:</strong> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸೇರಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮ ಮಾಡಲು ವಿಧಿಸುವ ಶುಲ್ಕವನ್ನು ಕಡಿಮೆ ಮಾಡುವಂತೆ ಕಂದಾಯ ನಿವೇಶನ ಮತ್ತು ಕಟ್ಟಡ ಮಾಲೀಕರ ಸಮಿತಿ ಸದಸ್ಯರು ಒತ್ತಾಯಿಸಿದರು.</p>.<p>ಸಮಿತಿ ಸದಸ್ಯರು ಹೆಬ್ಬಾಳ ಶಾಸಕ ಬೈರತಿ ಸುರೇಶ್ ನೇತೃತ್ವದಲ್ಲಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರನ್ನು ಗುರುವಾರ ಭೇಟಿಯಾಗಿ ಮನವಿ ಸಲ್ಲಿಸಿ ಒತ್ತಾಯಿಸಿದರು.</p>.<p>‘ಕೆಲವು ಪ್ರಕರಣಗಳಲ್ಲಿ ಕಂದಾಯ ನಿವೇಶನಗಳ ಮರು ಮಂಜೂರಾತಿಗೆ ವಿಧಿಸುತ್ತಿರುವ ಶುಲ್ಕ ನಿವೇಶನದ ದರಕ್ಕಿಂತ ಎರಡು ಪಟ್ಟು ಹೆಚ್ಚು ಇದೆ. ಮನೆ ಕಟ್ಟಿಕೊಂಡಿರುವವರು ಇಷ್ಟೊಂದು ದುಬಾರಿ ಶುಲ್ಕ ಪಾವತಿಸಲು ಸಾಧ್ಯವಿಲ್ಲ. ಹಾಗಾಗಿ ಶುಲ್ಕವನ್ನು ಕಡಿಮೆ ಮಾಡಬೇಕು’ ಎಂದು ಶಾಸಕ ಸುರೇಶ್ ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್, ‘ಬಿಡಿಎಗೆ ಸೇರಿದ ಜಾಗದಲ್ಲಿ 75 ಸಾವಿರಕ್ಕೂ ಅಧಿಕ ಮನೆಗಳನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ. ಭೂದಾಖಲೆಗಳಿಲ್ಲದ ಕಾರಣ ಈ ಮನೆಗಳಲ್ಲಿ ವಾಸಿಸುವವರಿಗೆ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಅವರಿಗೆ ಅನುಕೂಲ ಕಲ್ಪಿಸಲೆಂದೇ ಕಾನೂನು ಇಲಾಖೆಯ ಅಭಿಪ್ರಾಯ ಪಡೆದು ಇಂತಹ ಮನೆಗಳನ್ನು ಸಕ್ರಮ ಮಾಡಲು ಬಿಡಿಎ ಕಾಯ್ದೆಗೆ ತಿದ್ದುಪಡಿ ಮಾಡಿ ಸೆಕ್ಷನ್ 38(ಡಿ) ಸೇರ್ಪಡೆ ಮಾಡಲಾಗಿದೆ‘ ಎಂದರು.</p>.<p>‘ಆಯಾ ಪ್ರದೇಶದ ಮಾರ್ಗಸೂಚಿ ದರಕ್ಕೆ ಅನುಗುಣವಾಗಿ ಶುಲ್ಕವನ್ನು ವಿಧಿಸಿ ಮನೆಗಳನ್ನು ಸಕ್ರಮ ಮಾಡಿಕೊಟ್ಟು, ಸ್ವಾಧೀನ ಪತ್ರವನ್ನೂ ನೀಡಲಾಗುತ್ತದೆ. ಮನೆಗಳನ್ನು ಸಕ್ರಮ ಮಾಡಲು ನಿಗದಿಪಡಿಸಿರುವ ಶುಲ್ಕ ದುಬಾರಿ ಮತ್ತು ಅವೈಜ್ಞಾನಿಕ ಎಂಬ ದೂರುಗಳು ಬರುತ್ತಿವೆ. ಹಾಗಾಗಿ ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮರುಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದು ಭರವಸೆ ನೀಡಿದರು</p>.<p>‘ಕೆಲವರು ಮನೆಗೆ ಬಿಬಿಎಂಪಿಯಿಂದ ಕಂದಾಯ ಖಾತೆ ಅಥವಾ ಬಿ– ಖಾತೆ ಮಾಡಿಸಿಕೊಂಡಿದ್ದಾರೆ. ಆದರೆ, ಇವುಗಳಿಗೆ ಮಾನ್ಯತೆ ಇಲ್ಲ.ಇಂತಹ ಮನೆಗಳನ್ನು ನೆಲಸಮ ಮಾಡಲೂ ಸಾಧ್ಯವಿಲ್ಲ. ಈ ಬಿಕ್ಕಟ್ಟಿಗೆ ಪರಿಹಾರ ಕಲ್ಪಿಸಲೆಂದೇ ಗರಿಷ್ಠ 50x80 ಅಡಿಗಳಷ್ಟು ವಿಸ್ತೀರ್ಣದವರೆಗಿನ ನಿವೇಶನಗಳ ಮನೆಯನ್ನು ಮಾತ್ರ ಸಕ್ರಮ ಮಾಡಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಬಿಡಿಎ ಜಾಗದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಗುರುತಿಸುವ ಹೊಣೆಯನ್ನು ಖಾಸಗಿ ಸಂಸ್ಥೆಯೊಂದಕ್ಕೆ ವಹಿಸಿದ್ದೇವೆ. ಇಂತಹ ಮನೆಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮನೆಗಳ ಮಾಲೀಕರಿಗೆ ನೊಟೀಸ್ ನೀಡಿ ಸಕ್ರಮ ಮಾಡಿಕೊಳ್ಳುವಂತೆ ಸೂಚಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸೇರಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮ ಮಾಡಲು ವಿಧಿಸುವ ಶುಲ್ಕವನ್ನು ಕಡಿಮೆ ಮಾಡುವಂತೆ ಕಂದಾಯ ನಿವೇಶನ ಮತ್ತು ಕಟ್ಟಡ ಮಾಲೀಕರ ಸಮಿತಿ ಸದಸ್ಯರು ಒತ್ತಾಯಿಸಿದರು.</p>.<p>ಸಮಿತಿ ಸದಸ್ಯರು ಹೆಬ್ಬಾಳ ಶಾಸಕ ಬೈರತಿ ಸುರೇಶ್ ನೇತೃತ್ವದಲ್ಲಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರನ್ನು ಗುರುವಾರ ಭೇಟಿಯಾಗಿ ಮನವಿ ಸಲ್ಲಿಸಿ ಒತ್ತಾಯಿಸಿದರು.</p>.<p>‘ಕೆಲವು ಪ್ರಕರಣಗಳಲ್ಲಿ ಕಂದಾಯ ನಿವೇಶನಗಳ ಮರು ಮಂಜೂರಾತಿಗೆ ವಿಧಿಸುತ್ತಿರುವ ಶುಲ್ಕ ನಿವೇಶನದ ದರಕ್ಕಿಂತ ಎರಡು ಪಟ್ಟು ಹೆಚ್ಚು ಇದೆ. ಮನೆ ಕಟ್ಟಿಕೊಂಡಿರುವವರು ಇಷ್ಟೊಂದು ದುಬಾರಿ ಶುಲ್ಕ ಪಾವತಿಸಲು ಸಾಧ್ಯವಿಲ್ಲ. ಹಾಗಾಗಿ ಶುಲ್ಕವನ್ನು ಕಡಿಮೆ ಮಾಡಬೇಕು’ ಎಂದು ಶಾಸಕ ಸುರೇಶ್ ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್, ‘ಬಿಡಿಎಗೆ ಸೇರಿದ ಜಾಗದಲ್ಲಿ 75 ಸಾವಿರಕ್ಕೂ ಅಧಿಕ ಮನೆಗಳನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ. ಭೂದಾಖಲೆಗಳಿಲ್ಲದ ಕಾರಣ ಈ ಮನೆಗಳಲ್ಲಿ ವಾಸಿಸುವವರಿಗೆ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಅವರಿಗೆ ಅನುಕೂಲ ಕಲ್ಪಿಸಲೆಂದೇ ಕಾನೂನು ಇಲಾಖೆಯ ಅಭಿಪ್ರಾಯ ಪಡೆದು ಇಂತಹ ಮನೆಗಳನ್ನು ಸಕ್ರಮ ಮಾಡಲು ಬಿಡಿಎ ಕಾಯ್ದೆಗೆ ತಿದ್ದುಪಡಿ ಮಾಡಿ ಸೆಕ್ಷನ್ 38(ಡಿ) ಸೇರ್ಪಡೆ ಮಾಡಲಾಗಿದೆ‘ ಎಂದರು.</p>.<p>‘ಆಯಾ ಪ್ರದೇಶದ ಮಾರ್ಗಸೂಚಿ ದರಕ್ಕೆ ಅನುಗುಣವಾಗಿ ಶುಲ್ಕವನ್ನು ವಿಧಿಸಿ ಮನೆಗಳನ್ನು ಸಕ್ರಮ ಮಾಡಿಕೊಟ್ಟು, ಸ್ವಾಧೀನ ಪತ್ರವನ್ನೂ ನೀಡಲಾಗುತ್ತದೆ. ಮನೆಗಳನ್ನು ಸಕ್ರಮ ಮಾಡಲು ನಿಗದಿಪಡಿಸಿರುವ ಶುಲ್ಕ ದುಬಾರಿ ಮತ್ತು ಅವೈಜ್ಞಾನಿಕ ಎಂಬ ದೂರುಗಳು ಬರುತ್ತಿವೆ. ಹಾಗಾಗಿ ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮರುಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದು ಭರವಸೆ ನೀಡಿದರು</p>.<p>‘ಕೆಲವರು ಮನೆಗೆ ಬಿಬಿಎಂಪಿಯಿಂದ ಕಂದಾಯ ಖಾತೆ ಅಥವಾ ಬಿ– ಖಾತೆ ಮಾಡಿಸಿಕೊಂಡಿದ್ದಾರೆ. ಆದರೆ, ಇವುಗಳಿಗೆ ಮಾನ್ಯತೆ ಇಲ್ಲ.ಇಂತಹ ಮನೆಗಳನ್ನು ನೆಲಸಮ ಮಾಡಲೂ ಸಾಧ್ಯವಿಲ್ಲ. ಈ ಬಿಕ್ಕಟ್ಟಿಗೆ ಪರಿಹಾರ ಕಲ್ಪಿಸಲೆಂದೇ ಗರಿಷ್ಠ 50x80 ಅಡಿಗಳಷ್ಟು ವಿಸ್ತೀರ್ಣದವರೆಗಿನ ನಿವೇಶನಗಳ ಮನೆಯನ್ನು ಮಾತ್ರ ಸಕ್ರಮ ಮಾಡಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಬಿಡಿಎ ಜಾಗದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಗುರುತಿಸುವ ಹೊಣೆಯನ್ನು ಖಾಸಗಿ ಸಂಸ್ಥೆಯೊಂದಕ್ಕೆ ವಹಿಸಿದ್ದೇವೆ. ಇಂತಹ ಮನೆಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮನೆಗಳ ಮಾಲೀಕರಿಗೆ ನೊಟೀಸ್ ನೀಡಿ ಸಕ್ರಮ ಮಾಡಿಕೊಳ್ಳುವಂತೆ ಸೂಚಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>