ಪೆರಿಫೆರಲ್ ವರ್ತುಲ ರಸ್ತೆಗೆ ಭೂಮಿ ನೀಡಿದ್ದರೂ ಪರಿಹಾರ ನೀಡಿಲ್ಲ. ಭೂಮಿ ನೀಡಿರುವ ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗ ಮೀಸಲಿಡಬೇಕು. ಸಂಪರ್ಕ ರಸ್ತೆಗಳನ್ನು ನಿರ್ಮಿಸಬೇಕು, ಗ್ರಾಮಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂಬುದೂ ಸೇರಿ 11 ಬೇಡಿಕೆಗಳನ್ನು ರೈತರು ಸಭೆಯ ಮುಂದಿಟ್ಟರು. ಈ ಬೇಡಿಕೆಗಳನ್ನು ಈಡೇರಿಸುವ ಭರವಸೆ ಸಿಕ್ಕಿದ್ದರಿಂದ ರೈತರು ನ್ಯಾಯಾಲಯದಲ್ಲಿ ದಾಖಲಿಸಿರುವ ಪ್ರಕರಣ ವಾಪಸ್ ಪಡೆಯಲು ಸಮ್ಮತಿಸಿದರು.