<p><strong>ಬೆಂಗಳೂರು:</strong> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಸಾರ್ವಜನಿಕರ ಅನುಕೂಲಕ್ಕಾಗಿ ನಾಗರಿಕ ಸಹಾಯ ಕೇಂದ್ರ (ಸಿಎಸಿ) ತೆರೆದಿದ್ದು, ಕುಂದು ಕೊರತೆಗಳು ಅಥವಾ ಮನವಿಗಳ ಕುರಿತು 94831–66622 ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದು.</p>.<p>ಈ ಕೇಂದ್ರವು ನಿತ್ಯ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಕಾರ್ಯನಿರ್ವಹಿಸಲಿದ್ದು, ಕರೆಗಳನ್ನು ಸ್ವೀಕರಿಸಿ ಕೇಂದ್ರದ ಇ ಗರ್ವನೆನ್ಸ್ ಇಲಾಖೆ ಅಭಿವೃದ್ಧಿ ಪಡಿಸಿರುವ ಐಪಿಜಿಆರ್ಎಸ್ ಲಾಗಿನ್ ಅನ್ನು ಬಳಸಿ ತಂತ್ರಾಂಶದಲ್ಲಿ ಅಳವಡಿಸಿ, ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರದ ಆಯುಕ್ತರು ತಿಳಿಸಿದ್ದಾರೆ.</p>.<p>ಕುಂದು ಕೊರತೆ ನಿವಾರಣೆಗಾಗಿ ಸಾರ್ವಜನಿಕರು, ಹಿರಿಯರು, ಅಂಗವಿಕಲರು ಹಾಗೂ ಮಾಜಿ ಸೈನಿಕರು ನಿತ್ಯ ಕಚೇರಿ ಹಾಗೂ ವಿಭಾಗೀಯ ಕಚೇರಿಗಳಿಗೆ ಭೇಟಿ ನೀಡುವುದನ್ನು ಮನಗಂಡು ಈ ಕ್ರಮ ಕೈಗೊಳ್ಳಲಾಗಿದೆ.</p>.<p>ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸರ್ಕಾರದ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್ಎಸ್ ವೆಬ್ ಆ್ಯಪ್) ಅಥವಾ ನಾಗರಿಕ ಸಹಾಯ ಕೇಂದ್ರಕ್ಕೆ ಕರೆ ಮಾಡುವ ಮೂಲಕ ಅಥವಾ ನೇರವಾಗಿ ಪ್ರಾಧಿಕಾರಕ್ಕೆ ಸಲ್ಲಿಸಬಹುದು.</p>.<p>ಕುಂದುಕೊರತೆಗಳನ್ನು ಸಮರ್ಪಕವಾಗಿ ನಿರ್ವಹಿಸುವ ಜವಾಬ್ದಾರಿಯನ್ನು ಕಾರ್ಯದರ್ಶಿಗೆ ವಹಿಸಿ, ಸಿಎಸಿ ಕಾರ್ಯಾಚರಣೆ ಮತ್ತು ನಿರ್ವಹಣೆಯ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ತಂಡದಲ್ಲಿ ಕಾರ್ಯದರ್ಶಿಗೆ ಸಹಾಯಕ ನೋಡಲ್ ಅಧಿಕಾರಿಗಳಾಗಿ ವಿಶೇಷ ಭೂಸ್ವಾಧೀನಾಧಿಕಾರಿ (ಡಿಎಸ್ಕೆಎಲ್–6) ಹಾಗೂ ಸಂಚಾಲಕರಾಗಿ ಸಾರ್ವಜನಿಕ ಸಂಪರ್ಕಾಧಿಕಾರಿ ಅವರನ್ನು ನೇಮಿಸಲಾಗಿದೆ.</p>.<p>ಸಾರ್ವಜನಿಕರಿಂದ ಸ್ವೀಕೃತವಾದ ದೂರುಗಳನ್ನು ಪರಿಶೀಲಿಸಿ 30 ದಿನದೊಳಗೆ ಪರಿಹಾರ (ಎಲ್1, ಎಲ್2, ಎಲ್3 ಪ್ರತಿ ಹಂತಗಳಿಗೆ ಗರಿಷ್ಠ ಹತ್ತು ದಿನಗಳು) ಒದಗಿಸಲಾಗುವುದು. ಪ್ರಾಧಿಕಾರದ ನಿಯಮಗಳ ಅನುಸಾರ ಕ್ರಮವಹಿಸಲು ಸಾಧ್ಯವಿಲ್ಲದಿದ್ದಲ್ಲಿ ಸೂಕ್ತ ಹಿಂಬರಹ ನೀಡಿ ಮುಕ್ತಾಯ ಮಾಡಲಾಗುತ್ತದೆ.</p>.<p>ಪ್ರಾಧಿಕಾರವು ಕೈಗೊಂಡಿರುವ ಪರಿಹಾರ ಕ್ರಮವು ತೃಪ್ತಿಕರವಾಗದೇ ಇದ್ದಲ್ಲಿ ಅಥವಾ ಸಾರ್ವಜನಿಕರ ಅಹವಾಲನ್ನು ಪರಿಗಣಿಸಲು ಪ್ರಾಧಿಕಾರದ ನಿಯಮಗಳಲ್ಲಿ ಅವಕಾಶ ಇಲ್ಲದಿದ್ದಲ್ಲಿ ಅಂತಹ ಪ್ರಕರಣಗಳನ್ನು ಪ್ರತಿ ಗುರುವಾರ ಮಧ್ಯಾಹ್ನ ವಲಯವಾರು ಸಾರ್ವಜನಿಕರ ಸಮಕ್ಷಮದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕಾನೂನು ಪ್ರಕಾರ ಸಭೆ ನಡೆಸಲಾಗುವುದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಸಾರ್ವಜನಿಕರ ಅನುಕೂಲಕ್ಕಾಗಿ ನಾಗರಿಕ ಸಹಾಯ ಕೇಂದ್ರ (ಸಿಎಸಿ) ತೆರೆದಿದ್ದು, ಕುಂದು ಕೊರತೆಗಳು ಅಥವಾ ಮನವಿಗಳ ಕುರಿತು 94831–66622 ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದು.</p>.<p>ಈ ಕೇಂದ್ರವು ನಿತ್ಯ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಕಾರ್ಯನಿರ್ವಹಿಸಲಿದ್ದು, ಕರೆಗಳನ್ನು ಸ್ವೀಕರಿಸಿ ಕೇಂದ್ರದ ಇ ಗರ್ವನೆನ್ಸ್ ಇಲಾಖೆ ಅಭಿವೃದ್ಧಿ ಪಡಿಸಿರುವ ಐಪಿಜಿಆರ್ಎಸ್ ಲಾಗಿನ್ ಅನ್ನು ಬಳಸಿ ತಂತ್ರಾಂಶದಲ್ಲಿ ಅಳವಡಿಸಿ, ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರದ ಆಯುಕ್ತರು ತಿಳಿಸಿದ್ದಾರೆ.</p>.<p>ಕುಂದು ಕೊರತೆ ನಿವಾರಣೆಗಾಗಿ ಸಾರ್ವಜನಿಕರು, ಹಿರಿಯರು, ಅಂಗವಿಕಲರು ಹಾಗೂ ಮಾಜಿ ಸೈನಿಕರು ನಿತ್ಯ ಕಚೇರಿ ಹಾಗೂ ವಿಭಾಗೀಯ ಕಚೇರಿಗಳಿಗೆ ಭೇಟಿ ನೀಡುವುದನ್ನು ಮನಗಂಡು ಈ ಕ್ರಮ ಕೈಗೊಳ್ಳಲಾಗಿದೆ.</p>.<p>ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸರ್ಕಾರದ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್ಎಸ್ ವೆಬ್ ಆ್ಯಪ್) ಅಥವಾ ನಾಗರಿಕ ಸಹಾಯ ಕೇಂದ್ರಕ್ಕೆ ಕರೆ ಮಾಡುವ ಮೂಲಕ ಅಥವಾ ನೇರವಾಗಿ ಪ್ರಾಧಿಕಾರಕ್ಕೆ ಸಲ್ಲಿಸಬಹುದು.</p>.<p>ಕುಂದುಕೊರತೆಗಳನ್ನು ಸಮರ್ಪಕವಾಗಿ ನಿರ್ವಹಿಸುವ ಜವಾಬ್ದಾರಿಯನ್ನು ಕಾರ್ಯದರ್ಶಿಗೆ ವಹಿಸಿ, ಸಿಎಸಿ ಕಾರ್ಯಾಚರಣೆ ಮತ್ತು ನಿರ್ವಹಣೆಯ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ತಂಡದಲ್ಲಿ ಕಾರ್ಯದರ್ಶಿಗೆ ಸಹಾಯಕ ನೋಡಲ್ ಅಧಿಕಾರಿಗಳಾಗಿ ವಿಶೇಷ ಭೂಸ್ವಾಧೀನಾಧಿಕಾರಿ (ಡಿಎಸ್ಕೆಎಲ್–6) ಹಾಗೂ ಸಂಚಾಲಕರಾಗಿ ಸಾರ್ವಜನಿಕ ಸಂಪರ್ಕಾಧಿಕಾರಿ ಅವರನ್ನು ನೇಮಿಸಲಾಗಿದೆ.</p>.<p>ಸಾರ್ವಜನಿಕರಿಂದ ಸ್ವೀಕೃತವಾದ ದೂರುಗಳನ್ನು ಪರಿಶೀಲಿಸಿ 30 ದಿನದೊಳಗೆ ಪರಿಹಾರ (ಎಲ್1, ಎಲ್2, ಎಲ್3 ಪ್ರತಿ ಹಂತಗಳಿಗೆ ಗರಿಷ್ಠ ಹತ್ತು ದಿನಗಳು) ಒದಗಿಸಲಾಗುವುದು. ಪ್ರಾಧಿಕಾರದ ನಿಯಮಗಳ ಅನುಸಾರ ಕ್ರಮವಹಿಸಲು ಸಾಧ್ಯವಿಲ್ಲದಿದ್ದಲ್ಲಿ ಸೂಕ್ತ ಹಿಂಬರಹ ನೀಡಿ ಮುಕ್ತಾಯ ಮಾಡಲಾಗುತ್ತದೆ.</p>.<p>ಪ್ರಾಧಿಕಾರವು ಕೈಗೊಂಡಿರುವ ಪರಿಹಾರ ಕ್ರಮವು ತೃಪ್ತಿಕರವಾಗದೇ ಇದ್ದಲ್ಲಿ ಅಥವಾ ಸಾರ್ವಜನಿಕರ ಅಹವಾಲನ್ನು ಪರಿಗಣಿಸಲು ಪ್ರಾಧಿಕಾರದ ನಿಯಮಗಳಲ್ಲಿ ಅವಕಾಶ ಇಲ್ಲದಿದ್ದಲ್ಲಿ ಅಂತಹ ಪ್ರಕರಣಗಳನ್ನು ಪ್ರತಿ ಗುರುವಾರ ಮಧ್ಯಾಹ್ನ ವಲಯವಾರು ಸಾರ್ವಜನಿಕರ ಸಮಕ್ಷಮದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕಾನೂನು ಪ್ರಕಾರ ಸಭೆ ನಡೆಸಲಾಗುವುದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>