ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಮಹದೇವ, ‘ನಾವು ಸರ್ಕಾರ, ಆಡಳಿತ ಮಂಡಳಿ ಹಾಗೂ ನ್ಯಾಯಾಲಯದ ಆದೇಶ ಪಾಲನೆ ಮಾಡುತ್ತಿದ್ದೇವೆ. ಆಡಳಿತ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಇದುವರೆಗೂ ರದ್ದು ಪಡಿಸಿಲ್ಲ. ನ್ಯಾಯಾಲಯದ ಆದೇಶವೂ ಇರುವುದರಿಂದ ಭವಾನಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಜಾಗ ನೀಡಲೇ ಬೇಕಾಗುತ್ತದೆ’ ಎಂದರು.