‘ಬಿಡಿಎಯ ಹೆಸರಿನಲ್ಲಿ, ಆಯುಕ್ತರು ಹಾಗೂ ಅಧಿಕಾರಿಗಳ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಡವರ ಹೆಸರಿನಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲು ಸಿದ್ಧತೆ ನಡೆಸಿದ್ದ ಜಾಲವನ್ನು ಪ್ರಾಧಿಕಾರದ ಜಾಗೃತ ದಳ ಬೇಧಿಸಿದೆ. ಇಂತಹ ಹಗರಣಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಇತ್ತೀಚೆಗೆ ನಿರ್ಧರಿಸಲಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದೇವೆ’ ಎಂದು ವಿಶ್ವನಾಥ್ ತಿಳಿಸಿದರು.