<p>ಬೆಂಗಳೂರು<strong>:</strong> ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡ, ಶೇಡ್ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಎರಡು ದಿನಗಳಲ್ಲಿ ಒಟ್ಟು ₹370 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡಿದೆ.</p>.<p>ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿಯ ಆಲಹಳ್ಳಿ ಗ್ರಾಮದ ಸರ್ವೆ ನಂ. 6/2ರಲ್ಲಿ 1 ಎಕರೆ 3 ಗುಂಟೆ, 9/2ರಲ್ಲಿ 1 ಎಕರೆ 7 ಗುಂಟೆ, 10/3ರಲ್ಲಿ 2 ಎಕರೆ 20 ಗುಂಟೆ, 11/1ರಲ್ಲಿ 24 ಗುಂಟೆ, 15/1ರಲ್ಲಿ 36 ಗುಂಟೆ, 15/2ರಲ್ಲಿ 37 ಗುಂಟೆ, 15/3ರಲ್ಲಿ 1 ಎಕರೆ, 15/4ರಲ್ಲಿ 1 ಎಕರೆ-9 ಗುಂಟೆ, 15/5ರಲ್ಲಿ 1ಎಕರೆ-2 ಗುಂಟೆ, 15/6ರಲ್ಲಿ 2 ಗುಂಟೆ, 15/7ರಲ್ಲಿ 2 ಗುಂಟೆ ಸೇರಿ 10 ಎಕರೆ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳು ಹಾಗೂ ಶೆಡ್ಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿ ವಶಕ್ಕೆ ಪಡೆದಿದೆ. ಇವುಗಳ ಒಟ್ಟು ಮೌಲ್ಯ ₹305 ಕೋಟಿ ಎಂದು ಅಂದಾಜಿಸಲಾಗಿದೆ. </p>.<p>ಅದೇ ರೀತಿ ಆಲಹಳ್ಳಿ ಗ್ರಾಮದ ಸರ್ವೆ ನಂ. 82/1, 82/2, 82/3ರ 2.5 ಎಕರೆ ಪ್ರದೇಶದಲ್ಲಿ ಗುರುವಾರ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ, ಸುಮಾರು ₹65 ಕೋಟಿ ಬೆಲೆ ಬಾಳುವ ಜಾಗವನ್ನು ವಶಪಡಿಸಿಕೊಂಡಿದೆ.</p>.<p>ಬಿಡಿಎ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಕಾರ್ಯಪಾಲಕ ಎಂಜಿನಿಯರ್ ಅಶೋಕ್ ಬಾಗಿ, , ದಕ್ಷಿಣ ವಿಭಾಗ ಹಾಗೂ ನಾಡಪ್ರಭು ಕೆಂಪೇಗೌಡ ಬಡಾವಣೆ, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ರಾಜ್ಯ ಮೀಸಲು ಪೊಲೀಸ್ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು<strong>:</strong> ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡ, ಶೇಡ್ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಎರಡು ದಿನಗಳಲ್ಲಿ ಒಟ್ಟು ₹370 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡಿದೆ.</p>.<p>ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿಯ ಆಲಹಳ್ಳಿ ಗ್ರಾಮದ ಸರ್ವೆ ನಂ. 6/2ರಲ್ಲಿ 1 ಎಕರೆ 3 ಗುಂಟೆ, 9/2ರಲ್ಲಿ 1 ಎಕರೆ 7 ಗುಂಟೆ, 10/3ರಲ್ಲಿ 2 ಎಕರೆ 20 ಗುಂಟೆ, 11/1ರಲ್ಲಿ 24 ಗುಂಟೆ, 15/1ರಲ್ಲಿ 36 ಗುಂಟೆ, 15/2ರಲ್ಲಿ 37 ಗುಂಟೆ, 15/3ರಲ್ಲಿ 1 ಎಕರೆ, 15/4ರಲ್ಲಿ 1 ಎಕರೆ-9 ಗುಂಟೆ, 15/5ರಲ್ಲಿ 1ಎಕರೆ-2 ಗುಂಟೆ, 15/6ರಲ್ಲಿ 2 ಗುಂಟೆ, 15/7ರಲ್ಲಿ 2 ಗುಂಟೆ ಸೇರಿ 10 ಎಕರೆ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳು ಹಾಗೂ ಶೆಡ್ಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿ ವಶಕ್ಕೆ ಪಡೆದಿದೆ. ಇವುಗಳ ಒಟ್ಟು ಮೌಲ್ಯ ₹305 ಕೋಟಿ ಎಂದು ಅಂದಾಜಿಸಲಾಗಿದೆ. </p>.<p>ಅದೇ ರೀತಿ ಆಲಹಳ್ಳಿ ಗ್ರಾಮದ ಸರ್ವೆ ನಂ. 82/1, 82/2, 82/3ರ 2.5 ಎಕರೆ ಪ್ರದೇಶದಲ್ಲಿ ಗುರುವಾರ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ, ಸುಮಾರು ₹65 ಕೋಟಿ ಬೆಲೆ ಬಾಳುವ ಜಾಗವನ್ನು ವಶಪಡಿಸಿಕೊಂಡಿದೆ.</p>.<p>ಬಿಡಿಎ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಕಾರ್ಯಪಾಲಕ ಎಂಜಿನಿಯರ್ ಅಶೋಕ್ ಬಾಗಿ, , ದಕ್ಷಿಣ ವಿಭಾಗ ಹಾಗೂ ನಾಡಪ್ರಭು ಕೆಂಪೇಗೌಡ ಬಡಾವಣೆ, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ರಾಜ್ಯ ಮೀಸಲು ಪೊಲೀಸ್ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>