ಈಪ್ರಕರಣಗಳು ಮೇ ತಿಂಗಳಿನಲ್ಲಿ ದಾಖಲಾಗಿದ್ದು, ಅಂದಿನಿಂದ ತಲೆ ಮರೆಸಿಕೊಂಡಿದ್ದರು. ಅವರ ಬಂಧನಕ್ಕಾಗಿ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದರು. ಎಸಿಬಿ ತನಿಖೆಗೆ ಸಹಕರಿಸದ ಕೃಷ್ಣಲಾಲ್ ಅವರ ಮಧ್ಯಂತರ ಜಾಮೀನನ್ನು ವಿಶೇಷ ಲೋಕಾಯುಕ್ತ ನ್ಯಾಯಾಲಯ ರದ್ದುಪಡಿಸಿತ್ತು. ಬಳಿಕ ಹೈಕೋರ್ಟ್ ಮೆಟ್ಟಿಲೇರಿದ್ದ ಅವರಿಗೆ ಅಲ್ಲೂ ಹಿನ್ನಡೆಯಾಗಿತ್ತು. ಟಿಡಿಆರ್ ವಂಚನೆ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಎಸಿಬಿ ಅಧಿಕಾರಿಗಳು ಕೃಷ್ಣಲಾಲ್ ಹಾಗೂ ಅವರ ಆಪ್ತರ ಮನೆಗಳ ಮೇಲೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.