<p><strong>ಬೆಂಗಳೂರು</strong>: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಣಿಮಿಣಿಕೆ ಮತ್ತು ಹುಣ್ಣಿಗೆರೆಯ ವಸತಿ ಸಮುಚ್ಚಯದಲ್ಲಿ ಎರಡು ದಿನ ಆಯೋಜಿಸಿದ್ದ ಮೇಳಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, 25 ಫ್ಲ್ಯಾಟ್ಗಳು ಮತ್ತು 25 ಪ್ರೀಮಿಯಂ ವಿಲ್ಲಾಗಳು ಮಾರಾಟವಾಗಿವೆ.</p>.<p>ಮೇಳದಲ್ಲಿ 300ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದು, ಫ್ಲ್ಯಾಟ್ ಹಾಗೂ ಪ್ರೀಮಿಯಂ ವಿಲ್ಲಾಗಳನ್ನು ಖರೀದಿಸಿದರು. ಪ್ರಾರಂಭಿಕ ಠೇವಣಿ ಪಾವತಿಸಿದ ಗ್ರಾಹಕರಿಗೆ ಸ್ಥಳದಲ್ಲಿಯೇ ಹಂಚಿಕೆ ಪತ್ರ ವಿತರಿಸಲಾಯಿತು.</p>.<p>ಏಕಕಾಲದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲು ವಾಹನ ವ್ಯವಸ್ಥೆ ಮಾಡಲಾಗಿತ್ತು. ಸ್ವಯಂ ಸೇವಕರು ಫ್ಲ್ಯಾಟ್ಗಳ ಬಗ್ಗೆ ಮಾಹಿತಿ ನೀಡಿದರು. ₹1 ಲಕ್ಷ ಪಾವತಿಸಿ ಫ್ಲ್ಯಾಟ್ಗಳನ್ನು ಕಾಯ್ದಿರಿಸಿ, ಉಳಿದ ಪ್ರಾರಂಭಿಕ ಠೇವಣಿಯನ್ನು ಏಳು ದಿನಗಳೊಳಗೆ ಪಾವತಿಸಿದ್ದಲ್ಲಿ ಹಂಚಿಕೆ ಪತ್ರವನ್ನು ನೀಡಲಾಗುವುದು ಎಂದು ಬಿಡಿಎ ಅಧಿಕಾರಿಗಳು ತಿಳಿಸಿದರು.</p>.<p>ಕೆನರಾ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಎಚ್.ಡಿ.ಎಫ್.ಸಿ. ಬ್ಯಾಂಕ್ಗಳ ಪ್ರತಿನಿಧಿಗಳು ಸ್ಥಳದಲ್ಲಿ ಹಾಜರಿದ್ದರು.</p>.<p>ಬಿಡಿಎ ಆರ್ಥಿಕ ಸದಸ್ಯ ಎ. ಲೋಕೇಶ್, ಎಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸಮೂರ್ತಿ, ಉಪ ಕಾರ್ಯದರ್ಶಿ ಎಂ.ಎಸ್. ಜ್ಞಾನೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳಾದ ಇಂಬವಳ್ಳಿ, ಕುಮಾರ್, ಭುವನೇಶ್ವರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಣಿಮಿಣಿಕೆ ಮತ್ತು ಹುಣ್ಣಿಗೆರೆಯ ವಸತಿ ಸಮುಚ್ಚಯದಲ್ಲಿ ಎರಡು ದಿನ ಆಯೋಜಿಸಿದ್ದ ಮೇಳಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, 25 ಫ್ಲ್ಯಾಟ್ಗಳು ಮತ್ತು 25 ಪ್ರೀಮಿಯಂ ವಿಲ್ಲಾಗಳು ಮಾರಾಟವಾಗಿವೆ.</p>.<p>ಮೇಳದಲ್ಲಿ 300ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದು, ಫ್ಲ್ಯಾಟ್ ಹಾಗೂ ಪ್ರೀಮಿಯಂ ವಿಲ್ಲಾಗಳನ್ನು ಖರೀದಿಸಿದರು. ಪ್ರಾರಂಭಿಕ ಠೇವಣಿ ಪಾವತಿಸಿದ ಗ್ರಾಹಕರಿಗೆ ಸ್ಥಳದಲ್ಲಿಯೇ ಹಂಚಿಕೆ ಪತ್ರ ವಿತರಿಸಲಾಯಿತು.</p>.<p>ಏಕಕಾಲದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲು ವಾಹನ ವ್ಯವಸ್ಥೆ ಮಾಡಲಾಗಿತ್ತು. ಸ್ವಯಂ ಸೇವಕರು ಫ್ಲ್ಯಾಟ್ಗಳ ಬಗ್ಗೆ ಮಾಹಿತಿ ನೀಡಿದರು. ₹1 ಲಕ್ಷ ಪಾವತಿಸಿ ಫ್ಲ್ಯಾಟ್ಗಳನ್ನು ಕಾಯ್ದಿರಿಸಿ, ಉಳಿದ ಪ್ರಾರಂಭಿಕ ಠೇವಣಿಯನ್ನು ಏಳು ದಿನಗಳೊಳಗೆ ಪಾವತಿಸಿದ್ದಲ್ಲಿ ಹಂಚಿಕೆ ಪತ್ರವನ್ನು ನೀಡಲಾಗುವುದು ಎಂದು ಬಿಡಿಎ ಅಧಿಕಾರಿಗಳು ತಿಳಿಸಿದರು.</p>.<p>ಕೆನರಾ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಎಚ್.ಡಿ.ಎಫ್.ಸಿ. ಬ್ಯಾಂಕ್ಗಳ ಪ್ರತಿನಿಧಿಗಳು ಸ್ಥಳದಲ್ಲಿ ಹಾಜರಿದ್ದರು.</p>.<p>ಬಿಡಿಎ ಆರ್ಥಿಕ ಸದಸ್ಯ ಎ. ಲೋಕೇಶ್, ಎಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸಮೂರ್ತಿ, ಉಪ ಕಾರ್ಯದರ್ಶಿ ಎಂ.ಎಸ್. ಜ್ಞಾನೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳಾದ ಇಂಬವಳ್ಳಿ, ಕುಮಾರ್, ಭುವನೇಶ್ವರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>