<p><strong>ಬೆಂಗಳೂರು:</strong> ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸುವ ವಸತಿ ಸಮುಚ್ಚಯಗಳ ಮನೆಗಳಿಗೆ ಕೊಳವೆ ಮೂಲಕ ಅಡುಗೆ ಅನಿಲ ಪೂರೈಸಲಾಗುತ್ತದೆ’ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.</p>.<p>ಮಾಳಗಾಲದಲ್ಲಿ ಬಿಡಿಎ ನಿರ್ಮಿಸಿರುವ ಬ್ರಹ್ಮಗಿರಿ ವಸತಿ ಸಂಕೀರ್ಣಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಅಲ್ಲಿನ ವಸತಿ ಮಾಲೀಕರ ಸಂಘದ ನೂತನ ಕಚೇರಿಯನ್ನು ಉದ್ಘಾಟಿಸಿದರು.</p>.<p>‘ಬಿಡಿಎ ವಸತಿ ಸಂಕೀರ್ಣಗಳಿಗೆ ಕೊಳವೆಯಲ್ಲಿ ಅಡುಗೆ ಅನಿಲ ಪೂರೈಸುವಂತೆ ಕೋರಿ ಭಾರತೀಯ ಅನಿಲ ಪ್ರಾಧಿಕಾರಕ್ಕೆ (ಗೇಲ್) ಪತ್ರ ಬರೆದಿದ್ದೇವೆ. ಬಿಡಿಎ ವಸತಿ ಸಂಕೀರ್ಣಗಳಿಗೆ ಅಡುಗೆ ಅನಿಲ ಪೂರೈಸುವ ಬಗ್ಗೆ ಗೇಲ್ ಸಂಸ್ಥೆ ಆಸಕ್ತಿ ತೋರಿಸಿದೆ’ ಎಂದರು.</p>.<p>ಮಾಳಗಾಲ ವಸತಿ ಸಂಕೀರ್ಣದಲ್ಲಿ ನಿವಾಸಿಗಳ ಅನುಕೂಲಕ್ಕಾಗಿ ತೆರೆದ ವ್ಯಾಯಾಮ ಶಾಲೆ ಮತ್ತು ಮಕ್ಕಳಿಗಾಗಿ ಕ್ರೀಡಾ ಪರಿಕರಗಳನ್ನು ಅಳವಡಿಸಬೇಕು. ಬಾಕಿ ಇರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ವಿಶ್ವನಾಥ್ ಸೂಚನೆ ನೀಡಿದರು.</p>.<p>ನಾಗರಬಾವಿ ಬಳಿ ಚಂದ್ರಾ ಲೇಔಟ್ ನಲ್ಲಿ ನಿರ್ಮಾಣವಾಗುತ್ತಿರುವ ವಸತಿ ಸಂಕೀರ್ಣಕ್ಕೂ ಬಿಡಿಎ ಅಧ್ಯಕ್ಷರು ಭೇಟಿ ನೀಡಿದರು. ಇಲ್ಲಿನ ಕಾಮಗಾರಿಯನ್ನು ಮೂರು ತಿಂಗಳ ಒಳಗೆ ಪೂರ್ಣಗೊಳಿಸಬೇಕು. ಜೂನ್ ತಿಂಗಳ ಒಳಗೆ ವಸತಿ ಹಂಚಿಕೆಗೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.</p>.<p>ಕೊಮ್ಮಘಟ್ಟದಲ್ಲಿ ನೈಸ್ ರಸ್ತೆಗೆ ಹೊಂದಿಕೊಂಡ ಪ್ರದೇಶದಲ್ಲಿ ಬಿಡಿಎ ವಸತಿ ಸಮುಚ್ಚಯವನ್ನು ನಿರ್ಮಿಸುತ್ತಿದೆ. ಈ ಯೋಜನೆಯಲ್ಲಿ ಮೂರನೇ, ನಾಲ್ಕನೇ ಹಾಗೂ ಐದನೇ ಹಂತಗಳಲ್ಲಿ ನಿರ್ಮಾಣವಾಗುತ್ತಿರುವ ವಸತಿ ಸಂಕೀರ್ಣಗಳ ಕಾಮಗಾರಿ ಶೇ 70 ರಷ್ಟು ಪೂರ್ಣಗೊಂಡಿದೆ. ಉಳಿದ ಕಾಮಗಾರಿಯನ್ನು ಮುಂದಿನ ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ವಿಶ್ವನಾಥ್ ಸೂಚಿಸಿದರು.</p>.<p>‘ಬಿಡಿಎ ನಿರ್ಮಾಣ ಮಾಡುತ್ತಿರುವ ಅಪಾರ್ಟ್ಮೆಂಟ್ ಸಮುಚ್ಚಯಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಉತ್ತಮ ಗುಣಮಟ್ಟದ ಕಾಪಾಡದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸುವ ವಸತಿ ಸಮುಚ್ಚಯಗಳ ಮನೆಗಳಿಗೆ ಕೊಳವೆ ಮೂಲಕ ಅಡುಗೆ ಅನಿಲ ಪೂರೈಸಲಾಗುತ್ತದೆ’ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.</p>.<p>ಮಾಳಗಾಲದಲ್ಲಿ ಬಿಡಿಎ ನಿರ್ಮಿಸಿರುವ ಬ್ರಹ್ಮಗಿರಿ ವಸತಿ ಸಂಕೀರ್ಣಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಅಲ್ಲಿನ ವಸತಿ ಮಾಲೀಕರ ಸಂಘದ ನೂತನ ಕಚೇರಿಯನ್ನು ಉದ್ಘಾಟಿಸಿದರು.</p>.<p>‘ಬಿಡಿಎ ವಸತಿ ಸಂಕೀರ್ಣಗಳಿಗೆ ಕೊಳವೆಯಲ್ಲಿ ಅಡುಗೆ ಅನಿಲ ಪೂರೈಸುವಂತೆ ಕೋರಿ ಭಾರತೀಯ ಅನಿಲ ಪ್ರಾಧಿಕಾರಕ್ಕೆ (ಗೇಲ್) ಪತ್ರ ಬರೆದಿದ್ದೇವೆ. ಬಿಡಿಎ ವಸತಿ ಸಂಕೀರ್ಣಗಳಿಗೆ ಅಡುಗೆ ಅನಿಲ ಪೂರೈಸುವ ಬಗ್ಗೆ ಗೇಲ್ ಸಂಸ್ಥೆ ಆಸಕ್ತಿ ತೋರಿಸಿದೆ’ ಎಂದರು.</p>.<p>ಮಾಳಗಾಲ ವಸತಿ ಸಂಕೀರ್ಣದಲ್ಲಿ ನಿವಾಸಿಗಳ ಅನುಕೂಲಕ್ಕಾಗಿ ತೆರೆದ ವ್ಯಾಯಾಮ ಶಾಲೆ ಮತ್ತು ಮಕ್ಕಳಿಗಾಗಿ ಕ್ರೀಡಾ ಪರಿಕರಗಳನ್ನು ಅಳವಡಿಸಬೇಕು. ಬಾಕಿ ಇರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ವಿಶ್ವನಾಥ್ ಸೂಚನೆ ನೀಡಿದರು.</p>.<p>ನಾಗರಬಾವಿ ಬಳಿ ಚಂದ್ರಾ ಲೇಔಟ್ ನಲ್ಲಿ ನಿರ್ಮಾಣವಾಗುತ್ತಿರುವ ವಸತಿ ಸಂಕೀರ್ಣಕ್ಕೂ ಬಿಡಿಎ ಅಧ್ಯಕ್ಷರು ಭೇಟಿ ನೀಡಿದರು. ಇಲ್ಲಿನ ಕಾಮಗಾರಿಯನ್ನು ಮೂರು ತಿಂಗಳ ಒಳಗೆ ಪೂರ್ಣಗೊಳಿಸಬೇಕು. ಜೂನ್ ತಿಂಗಳ ಒಳಗೆ ವಸತಿ ಹಂಚಿಕೆಗೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.</p>.<p>ಕೊಮ್ಮಘಟ್ಟದಲ್ಲಿ ನೈಸ್ ರಸ್ತೆಗೆ ಹೊಂದಿಕೊಂಡ ಪ್ರದೇಶದಲ್ಲಿ ಬಿಡಿಎ ವಸತಿ ಸಮುಚ್ಚಯವನ್ನು ನಿರ್ಮಿಸುತ್ತಿದೆ. ಈ ಯೋಜನೆಯಲ್ಲಿ ಮೂರನೇ, ನಾಲ್ಕನೇ ಹಾಗೂ ಐದನೇ ಹಂತಗಳಲ್ಲಿ ನಿರ್ಮಾಣವಾಗುತ್ತಿರುವ ವಸತಿ ಸಂಕೀರ್ಣಗಳ ಕಾಮಗಾರಿ ಶೇ 70 ರಷ್ಟು ಪೂರ್ಣಗೊಂಡಿದೆ. ಉಳಿದ ಕಾಮಗಾರಿಯನ್ನು ಮುಂದಿನ ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ವಿಶ್ವನಾಥ್ ಸೂಚಿಸಿದರು.</p>.<p>‘ಬಿಡಿಎ ನಿರ್ಮಾಣ ಮಾಡುತ್ತಿರುವ ಅಪಾರ್ಟ್ಮೆಂಟ್ ಸಮುಚ್ಚಯಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಉತ್ತಮ ಗುಣಮಟ್ಟದ ಕಾಪಾಡದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>