<p><strong>ಬೆಂಗಳೂರು:</strong>ನಾಡಪ್ರಭು ಕೆಂಪೇಗೌಡ ಬಡಾವಣೆ (ಎನ್ಪಿಕೆಎಲ್) ನಿರ್ಮಾಣಕ್ಕೆ ಭೂಮಿ ನೀಡಿರುವ ರೈತರ ಜತೆ ಬಿಡಿಎ ಆಯುಕ್ತರಾದ ಡಾ.ಎನ್. ಮಂಜುಳಾ ಶುಕ್ರವಾರ ಸಭೆ ನಡೆಸಿದರು.</p>.<p>ಎನ್ಪಿಕೆಎಲ್ ಮತ್ತು ಪೆರಿಫೆರಲ್ ವರ್ತುಲ ರಸ್ತೆ (ಪಿಆರ್ಆರ್) ನಿರ್ಮಾಣಕ್ಕೆ ಭೂಮಿ ನೀಡಿರುವ 12 ಗ್ರಾಮಗಳ ರೈತರೊಂದಿಗೆ ಸಭೆ ನಡೆಸಿದ ಆಯುಕ್ತರು, ಅಹವಾಲು ಆಲಿಸಿದರು.ನಿವೇಶನ ನೋಂದಣಿ ಮಾಡಿಕೊಡಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ದೂರಿದ ರೈತರು, ಪರಿಹಾರ ನೀಡಬೇಕು ಎಂದೂ ಒತ್ತಾಯಿಸಿದರು.</p>.<p>‘ನಿಯಮದಂತೆ ಬಡಾವಣೆಗೆ ಭೂಮಿ ನೀಡಿದವರಿಗೆ ನಿವೇಶನ ನೀಡುವ ಬದಲಿಗೆ, ಅರ್ಕಾವತಿ ಲೇಔಟ್ ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ, ಎನ್ಪಿಕೆಎಲ್ ಬಡಾವಣೆಯಲ್ಲಿ ನಿವೇಶನ ನೀಡಲಾಗುತ್ತಿದೆ. ಬಿಡಿಎ ಅವೈಜ್ಞಾನಿಕವಾಗಿ ನಿವೇಶನ ಹಂಚಿಕೆ ಮಾಡುತ್ತಿದೆ’ ಎಂದು ಎನ್ಪಿಕೆಎಲ್ ಹೋರಾಟ ಸಮಿತಿ ಅಧ್ಯಕ್ಷ ಚನ್ನಪ್ಪ ದೂರಿದರು.</p>.<p>‘ದಶಕ ಕಳೆದರೂ ನಮ್ಮ ಬೇಡಿಕೆಗೆ ಬಿಡಿಎ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಪರಿಸ್ಥಿತಿ ಹೀಗೇ ಮುಂದುವರಿದರೆ, ಬಡಾವಣೆ ನಿರ್ಮಾಣಕ್ಕೆ ನೀಡಿರುವ ನಮ್ಮ ಭೂಮಿಯನ್ನು ವಾಪಸ್ ಪಡೆಯುತ್ತೇವೆ. ಜಮೀನಿನ ಸುತ್ತಲೂ ಬೇಲಿ ಹಾಕುತ್ತೇವೆ’ ಎಂದು ರೈತರು ಎಚ್ಚರಿಸಿದರು.</p>.<p>ತಿಂಗಳೊಳಗೆ ಬೇಡಿಕೆ ಈಡೇರಿಸುವುದಾಗಿ ಆಯುಕ್ತರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ನಾಡಪ್ರಭು ಕೆಂಪೇಗೌಡ ಬಡಾವಣೆ (ಎನ್ಪಿಕೆಎಲ್) ನಿರ್ಮಾಣಕ್ಕೆ ಭೂಮಿ ನೀಡಿರುವ ರೈತರ ಜತೆ ಬಿಡಿಎ ಆಯುಕ್ತರಾದ ಡಾ.ಎನ್. ಮಂಜುಳಾ ಶುಕ್ರವಾರ ಸಭೆ ನಡೆಸಿದರು.</p>.<p>ಎನ್ಪಿಕೆಎಲ್ ಮತ್ತು ಪೆರಿಫೆರಲ್ ವರ್ತುಲ ರಸ್ತೆ (ಪಿಆರ್ಆರ್) ನಿರ್ಮಾಣಕ್ಕೆ ಭೂಮಿ ನೀಡಿರುವ 12 ಗ್ರಾಮಗಳ ರೈತರೊಂದಿಗೆ ಸಭೆ ನಡೆಸಿದ ಆಯುಕ್ತರು, ಅಹವಾಲು ಆಲಿಸಿದರು.ನಿವೇಶನ ನೋಂದಣಿ ಮಾಡಿಕೊಡಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ದೂರಿದ ರೈತರು, ಪರಿಹಾರ ನೀಡಬೇಕು ಎಂದೂ ಒತ್ತಾಯಿಸಿದರು.</p>.<p>‘ನಿಯಮದಂತೆ ಬಡಾವಣೆಗೆ ಭೂಮಿ ನೀಡಿದವರಿಗೆ ನಿವೇಶನ ನೀಡುವ ಬದಲಿಗೆ, ಅರ್ಕಾವತಿ ಲೇಔಟ್ ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ, ಎನ್ಪಿಕೆಎಲ್ ಬಡಾವಣೆಯಲ್ಲಿ ನಿವೇಶನ ನೀಡಲಾಗುತ್ತಿದೆ. ಬಿಡಿಎ ಅವೈಜ್ಞಾನಿಕವಾಗಿ ನಿವೇಶನ ಹಂಚಿಕೆ ಮಾಡುತ್ತಿದೆ’ ಎಂದು ಎನ್ಪಿಕೆಎಲ್ ಹೋರಾಟ ಸಮಿತಿ ಅಧ್ಯಕ್ಷ ಚನ್ನಪ್ಪ ದೂರಿದರು.</p>.<p>‘ದಶಕ ಕಳೆದರೂ ನಮ್ಮ ಬೇಡಿಕೆಗೆ ಬಿಡಿಎ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಪರಿಸ್ಥಿತಿ ಹೀಗೇ ಮುಂದುವರಿದರೆ, ಬಡಾವಣೆ ನಿರ್ಮಾಣಕ್ಕೆ ನೀಡಿರುವ ನಮ್ಮ ಭೂಮಿಯನ್ನು ವಾಪಸ್ ಪಡೆಯುತ್ತೇವೆ. ಜಮೀನಿನ ಸುತ್ತಲೂ ಬೇಲಿ ಹಾಕುತ್ತೇವೆ’ ಎಂದು ರೈತರು ಎಚ್ಚರಿಸಿದರು.</p>.<p>ತಿಂಗಳೊಳಗೆ ಬೇಡಿಕೆ ಈಡೇರಿಸುವುದಾಗಿ ಆಯುಕ್ತರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>