<p><strong>ಬೆಂಗಳೂರು:</strong> ನಗರದ ಕರಗ ಮಹೋತ್ಸವದ ಪೂಜಾ ಸ್ಥಳವಾದ ಕಂಠೀರವ ಕ್ರೀಡಾಂಗಣದ ಆವರಣದಲ್ಲಿರುವ ಹಸಿ ಕರಗ ಮಂಟಪವನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ. ಇದಕ್ಕಾಗಿ ಸುಮಾರು ₹4 ಕೋಟಿ ಮಂಜೂರಾತಿಗೆ ಬಿಡಿಎ ಅನುಮೋದನೆ ನೀಡಿದೆ.</p>.<p>ಈ ನಿರ್ಧಾರ ಕೈಗೊಂಡಿದ್ದಕ್ಕೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ಶುಕ್ರವಾರ ವಹ್ನಿಕುಲ ಕ್ಷತ್ರಿಯ ಸಮಾಜದ ಮುಖಂಡರು ಸನ್ಮಾನಿಸಿದರು.</p>.<p>ವಿಧಾನಪರಿಷತ್ ಸದಸ್ಯ ಪಿ.ಆರ್. ರಮೇಶ್, ತಿಗಳರ ಸಂಘದ ಸುಬ್ಬಣ್ಣ, ಲಕ್ಷ್ಮಣ್, ಲೋಕೇಶ್, ಕೃಷ್ಣಮೂರ್ತಿ, ಯಾದಗಿರಿ ರಾಮಚಂದ್ರ, ಸುರೇಶ್, ಜಯರಾಜ್ ಇದ್ದರು.</p>.<p><strong>ಏನೇನು ಅಭಿವೃದ್ಧಿ?:</strong> ಹಸಿ ಕರಗ ಮಂಟಪ ಅಭಿವೃದ್ಧಿ, ಕಲ್ಯಾಣಿ ಜೀರ್ಣೋದ್ಧಾರ, ಬೃಂದಾವನ, ಧ್ಯಾನ ಮಂದಿರ, ಭಕ್ತರು ಕುಳಿತುಕೊಳ್ಳಲು ವ್ಯವಸ್ಥೆ, ದೀಪಾಲಂಕಾರ ವ್ಯವಸ್ಥೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಕರಗ ಮಹೋತ್ಸವದ ಪೂಜಾ ಸ್ಥಳವಾದ ಕಂಠೀರವ ಕ್ರೀಡಾಂಗಣದ ಆವರಣದಲ್ಲಿರುವ ಹಸಿ ಕರಗ ಮಂಟಪವನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ. ಇದಕ್ಕಾಗಿ ಸುಮಾರು ₹4 ಕೋಟಿ ಮಂಜೂರಾತಿಗೆ ಬಿಡಿಎ ಅನುಮೋದನೆ ನೀಡಿದೆ.</p>.<p>ಈ ನಿರ್ಧಾರ ಕೈಗೊಂಡಿದ್ದಕ್ಕೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ಶುಕ್ರವಾರ ವಹ್ನಿಕುಲ ಕ್ಷತ್ರಿಯ ಸಮಾಜದ ಮುಖಂಡರು ಸನ್ಮಾನಿಸಿದರು.</p>.<p>ವಿಧಾನಪರಿಷತ್ ಸದಸ್ಯ ಪಿ.ಆರ್. ರಮೇಶ್, ತಿಗಳರ ಸಂಘದ ಸುಬ್ಬಣ್ಣ, ಲಕ್ಷ್ಮಣ್, ಲೋಕೇಶ್, ಕೃಷ್ಣಮೂರ್ತಿ, ಯಾದಗಿರಿ ರಾಮಚಂದ್ರ, ಸುರೇಶ್, ಜಯರಾಜ್ ಇದ್ದರು.</p>.<p><strong>ಏನೇನು ಅಭಿವೃದ್ಧಿ?:</strong> ಹಸಿ ಕರಗ ಮಂಟಪ ಅಭಿವೃದ್ಧಿ, ಕಲ್ಯಾಣಿ ಜೀರ್ಣೋದ್ಧಾರ, ಬೃಂದಾವನ, ಧ್ಯಾನ ಮಂದಿರ, ಭಕ್ತರು ಕುಳಿತುಕೊಳ್ಳಲು ವ್ಯವಸ್ಥೆ, ದೀಪಾಲಂಕಾರ ವ್ಯವಸ್ಥೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>