<p><strong>ಬೆಂಗಳೂರು:</strong> ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳನ್ನು ₹ 330 ಕೋಟಿ ವೆಚ್ಚದಲ್ಲಿ ನವೀಕರಣ ಮತ್ತು ಪುನರ್ ನಿರ್ಮಾಣ ಮಾಡುವ ಪ್ರಸ್ತಾವಕ್ಕೆ ತಡೆ ನೀಡಬೇಕು’ ಎಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಬಿಡಿಎಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಈ ಕುರಿತಂತೆ ಜಿ.ಎಂ.ಪಾಳ್ಯದ ಹಿರಿಯ ನಾಗರಿಕ ನೆಲ್ಲೀರ ಎಂ. ಸುಬ್ಬಯ್ಯ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದ್ದು, 2019ರ ಜುಲೈ 5ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಬಿಡಿಎಗೆ ನಿರ್ದೇಶಿಸಿದೆ.</p>.<p class="Subhead">ಆಕ್ಷೇಪಣೆ ಏನು: ‘ಬಿಡಿಎ ವ್ಯಾಪ್ತಿಯಲ್ಲಿ 68 ಲೇ ಔಟ್ಗಳಿವೆ. ಇಲ್ಲಿನ ವಾಣಿಜ್ಯ ಮಳಿಗೆಗಳನ್ನು ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ₹ 330 ಕೋಟಿ ವೆಚ್ಚದಲ್ಲಿ ನವೀಕರಿಸುವ ಪ್ರಸ್ತಾವದ ಹಿಂದೆ ಪ್ರಭಾವಿ ಶಕ್ತಿಗಳ ಕೈವಾಡವಿದೆ’ ಎಂಬುದು ಅರ್ಜಿದಾರ ಆರೋಪ.</p>.<p>‘68 ಲೇ ಔಟ್ಗಳಲ್ಲಿ ಅನೇಕ ವಾಣಿಜ್ಯ ಮಳಿಗೆಗೆ ಮೀಸಲಾದ ನಿವೇಶನಗಳನ್ನು ವಾಸದ ನಿವೇಶನಗಳಾಗಿ ಅಕ್ರಮ<br />ವಾಗಿ ಪರಿವರ್ತಿಸಲಾಗಿದೆ. ಅಂತೆಯೇ ಅಗತ್ಯಕ್ಕಿಂತ ಹೆಚ್ಚಿನ ಮಾಲ್ಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದೆ. ಪುನಃ ಈಗ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ವಾಣಿಜ್ಯ ಮಳಿಗೆ ನಿರ್ಮಿಸುವ ಉದ್ದೇಶ ಸಾರ್ವಜನಿಕರ ತೆರಿಗೆ ಹಣ ದುರುಪಯೋಗಪಡಿಸಿಕೊಂಡಂತೆ’ ಎಂಬುದು ಅರ್ಜಿದಾರರ ಆರೋಪ.</p>.<p>‘ಬಿಡಿಎ ವಾಣಿಜ್ಯ ಮಳಿಗೆಗಳ ಅಕ್ರಮಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯಕ್ಕೂ ಮನವಿ ಸಲ್ಲಿಸಿದ್ದೇನೆ. ಅಲ್ಲಿಂದ ಬಂದಿರುವ ನಿರ್ದೇಶನಗಳನ್ನು ರಾಜ್ಯ ಸರ್ಕಾರ ಪಾಲಿಸಿಲ್ಲ. ಬಹಳಷ್ಟು ಬಿಡಿಎ ವಾಣಿಜ್ಯ ಮಳಿಗೆಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದು ಈ ನಿಟ್ಟಿನಲ್ಲಿ ಸ್ಥಳೀಯ ಆಕ್ಷೇಪಣೆಗಳನ್ನು ಕಡೆಗಣಿಸಲಾಗಿದೆ‘ ಎಂದು ಸುಬ್ಬಯ್ಯ ಅರ್ಜಿಯಲ್ಲಿ ಆಕ್ಷೇಪಿಸಿದ್ದಾರೆ.</p>.<p><strong>‘ಅಧಿಕಾರಿಗಳ ಸಂಘಟಿತ ಅಪರಾಧ’</strong></p>.<p>‘ಬಿಡಿಎ ಮತ್ತು ಕಂದಾಯ ಅಧಿಕಾರಿಗಳು ಸರ್ಕಾರದ ಕೋಟ್ಯಂತರ ಮೊತ್ತದ ಸ್ಥಿರಾಸ್ತಿ ಕಬಳಿಸುವಲ್ಲಿ ಅಕ್ರಮ ಕೂಟ ರಚಿಸಿಕೊಂಡಿದ್ದು ಸಂಘಟಿತ ಅಪರಾಧ ಎಸಗುತ್ತಿದ್ದಾರೆ’ ಎಂಬುದು ಅರ್ಜಿದಾರರ ಆರೋಪ.</p>.<p>‘ಮಂಜೂರಾತಿ ನಕ್ಷೆ, ಖಾತೆ, ಖಾತೆ ಪ್ರಮಾಣ ಪತ್ರ, ತೆರಿಗೆ ರಶೀದಿಗಳ ನಕಲು ಸೃಷ್ಟಿಸಿ ಸರ್ಕಾರಕ್ಕೆ ಮೋಸ ಮಾಡಲಾಗುತ್ತಿದೆ. ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ಹೈಕೋರ್ಟ್ ಮತ್ತು ನಗರಾಭಿವೃದ್ಧಿ ಇಲಾಖೆ ನೀಡಿದ ಆದೇಶಗಳನ್ನು ನಿರ್ಲಕ್ಷಿಸಲಾಗಿದೆ’ ಎಂದೂ ಆಕ್ಷೇಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳನ್ನು ₹ 330 ಕೋಟಿ ವೆಚ್ಚದಲ್ಲಿ ನವೀಕರಣ ಮತ್ತು ಪುನರ್ ನಿರ್ಮಾಣ ಮಾಡುವ ಪ್ರಸ್ತಾವಕ್ಕೆ ತಡೆ ನೀಡಬೇಕು’ ಎಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಬಿಡಿಎಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಈ ಕುರಿತಂತೆ ಜಿ.ಎಂ.ಪಾಳ್ಯದ ಹಿರಿಯ ನಾಗರಿಕ ನೆಲ್ಲೀರ ಎಂ. ಸುಬ್ಬಯ್ಯ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದ್ದು, 2019ರ ಜುಲೈ 5ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಬಿಡಿಎಗೆ ನಿರ್ದೇಶಿಸಿದೆ.</p>.<p class="Subhead">ಆಕ್ಷೇಪಣೆ ಏನು: ‘ಬಿಡಿಎ ವ್ಯಾಪ್ತಿಯಲ್ಲಿ 68 ಲೇ ಔಟ್ಗಳಿವೆ. ಇಲ್ಲಿನ ವಾಣಿಜ್ಯ ಮಳಿಗೆಗಳನ್ನು ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ₹ 330 ಕೋಟಿ ವೆಚ್ಚದಲ್ಲಿ ನವೀಕರಿಸುವ ಪ್ರಸ್ತಾವದ ಹಿಂದೆ ಪ್ರಭಾವಿ ಶಕ್ತಿಗಳ ಕೈವಾಡವಿದೆ’ ಎಂಬುದು ಅರ್ಜಿದಾರ ಆರೋಪ.</p>.<p>‘68 ಲೇ ಔಟ್ಗಳಲ್ಲಿ ಅನೇಕ ವಾಣಿಜ್ಯ ಮಳಿಗೆಗೆ ಮೀಸಲಾದ ನಿವೇಶನಗಳನ್ನು ವಾಸದ ನಿವೇಶನಗಳಾಗಿ ಅಕ್ರಮ<br />ವಾಗಿ ಪರಿವರ್ತಿಸಲಾಗಿದೆ. ಅಂತೆಯೇ ಅಗತ್ಯಕ್ಕಿಂತ ಹೆಚ್ಚಿನ ಮಾಲ್ಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದೆ. ಪುನಃ ಈಗ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ವಾಣಿಜ್ಯ ಮಳಿಗೆ ನಿರ್ಮಿಸುವ ಉದ್ದೇಶ ಸಾರ್ವಜನಿಕರ ತೆರಿಗೆ ಹಣ ದುರುಪಯೋಗಪಡಿಸಿಕೊಂಡಂತೆ’ ಎಂಬುದು ಅರ್ಜಿದಾರರ ಆರೋಪ.</p>.<p>‘ಬಿಡಿಎ ವಾಣಿಜ್ಯ ಮಳಿಗೆಗಳ ಅಕ್ರಮಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯಕ್ಕೂ ಮನವಿ ಸಲ್ಲಿಸಿದ್ದೇನೆ. ಅಲ್ಲಿಂದ ಬಂದಿರುವ ನಿರ್ದೇಶನಗಳನ್ನು ರಾಜ್ಯ ಸರ್ಕಾರ ಪಾಲಿಸಿಲ್ಲ. ಬಹಳಷ್ಟು ಬಿಡಿಎ ವಾಣಿಜ್ಯ ಮಳಿಗೆಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದು ಈ ನಿಟ್ಟಿನಲ್ಲಿ ಸ್ಥಳೀಯ ಆಕ್ಷೇಪಣೆಗಳನ್ನು ಕಡೆಗಣಿಸಲಾಗಿದೆ‘ ಎಂದು ಸುಬ್ಬಯ್ಯ ಅರ್ಜಿಯಲ್ಲಿ ಆಕ್ಷೇಪಿಸಿದ್ದಾರೆ.</p>.<p><strong>‘ಅಧಿಕಾರಿಗಳ ಸಂಘಟಿತ ಅಪರಾಧ’</strong></p>.<p>‘ಬಿಡಿಎ ಮತ್ತು ಕಂದಾಯ ಅಧಿಕಾರಿಗಳು ಸರ್ಕಾರದ ಕೋಟ್ಯಂತರ ಮೊತ್ತದ ಸ್ಥಿರಾಸ್ತಿ ಕಬಳಿಸುವಲ್ಲಿ ಅಕ್ರಮ ಕೂಟ ರಚಿಸಿಕೊಂಡಿದ್ದು ಸಂಘಟಿತ ಅಪರಾಧ ಎಸಗುತ್ತಿದ್ದಾರೆ’ ಎಂಬುದು ಅರ್ಜಿದಾರರ ಆರೋಪ.</p>.<p>‘ಮಂಜೂರಾತಿ ನಕ್ಷೆ, ಖಾತೆ, ಖಾತೆ ಪ್ರಮಾಣ ಪತ್ರ, ತೆರಿಗೆ ರಶೀದಿಗಳ ನಕಲು ಸೃಷ್ಟಿಸಿ ಸರ್ಕಾರಕ್ಕೆ ಮೋಸ ಮಾಡಲಾಗುತ್ತಿದೆ. ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ಹೈಕೋರ್ಟ್ ಮತ್ತು ನಗರಾಭಿವೃದ್ಧಿ ಇಲಾಖೆ ನೀಡಿದ ಆದೇಶಗಳನ್ನು ನಿರ್ಲಕ್ಷಿಸಲಾಗಿದೆ’ ಎಂದೂ ಆಕ್ಷೇಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>