‘ರಸ್ತೆಯನ್ನು ಅಗೆದು ಹಾಳು ಮಾಡುವುದನ್ನು ತಪ್ಪಿಸಲು ಪ್ರತಿಯೊಂದು ನಿವೇಶನಗಳಿಗೂ ನೆಲದಡಿ ವಿದ್ಯುತ್ ಕೇಬಲ್, ನೀರಿನ ಪೈಪ್, ಒಳಚರಂಡಿ ಸಂಪರ್ಕಗಳನ್ನು ಒದಗಿಸುವ ಕಾಮಗಾರಿ ಮಾಡಲಾಗಿದೆ. ಇದರಿಂದ ಕಟ್ಟಡ ನಿರ್ಮಿಸುವವರು ಮೂಲ ಸೌಕರ್ಯಗಳ ಸಂಪರ್ಕಕ್ಕೆ ರಸ್ತೆ ಅಗೆಯುವ ಅವಶ್ಯಕತೆ ಇಲ್ಲ. ಆದರೆ, ಈ ನಡುವೆ ರಸ್ತೆ ಪುನಶ್ಚೇತನಕ್ಕೆ ಎಂದು ಹೆಚ್ಚುವರಿಯಾಗಿ ಹಣ ವಸೂಲಿ ಮಾಡುತ್ತಿರುವುದು ಖಂಡನಾರ್ಹ’ ಎಂದು ಹೇಳಿದರು.