ನಿವೇಶನ ಹಂಚಿಕೆ, ಬದಲಿ ನಿವೇಶನಗಳ ಮಂಜೂರಾತಿ, ಭೂಮಾಲೀಕರಿಗೆ ಪರಿಹಾರ ನೀಡುವಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿರುವ ದೂರುಗಳನ್ನು ಆಧರಿಸಿ ಶುಕ್ರವಾರ ಮಧ್ಯಾಹ್ನ ಬಿಡಿಎ ಕೇಂದ್ರ ಕಚೇರಿ ಮೇಲೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಆಗ ಕಚೇರಿ ಆವರಣದಲ್ಲಿದ್ದ ಅನಿಲ್ ಕುಮಾರ್, ಮಂಜಪ್ಪ
ಮತ್ತು ಆದಿನಾರಾಯಣ ಎಂಬ ದಲ್ಲಾಳಿಗಳನ್ನು ತನಿಖಾ ತಂಡ ವಶಕ್ಕೆ ಪಡೆದಿತ್ತು.