ಬೆಂಗಳೂರು: ಪೆರಿಫೆರಲ್ ವರ್ತುಲ ರಸ್ತೆ (ಪಿಆರ್ಆರ್) ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನು ಪಡೆಯಲು ಇದೇ 3ರಂದು ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಿದ್ದ ‘ವರ್ಚ್ಯುವಲ್ ಕಾನ್ಫರೆನ್ಸ್’ (ವೆಬಿನಾರ್) ಅನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮುಂದೂಡಿದೆ.
ಈ ಕುರಿತ ವೆಬಿನಾರ್ ಇದೇ 23ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಬಿಡಿಎ ಆಯುಕ್ತ ಎಚ್.ಆರ್.ಮಹದೇವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.