<p><strong>ಬೆಂಗಳೂರು: </strong>ಬೆಂಗಳೂರು ಪೂರ್ವ ತಾಲ್ಲೂಕಿನ ಕೋನದಾಸಪುರದಲ್ಲಿ ಸುಸಜ್ಜಿತವಾದ ಬಹೂಪಯೋಗಿ ಟೌನ್ ಶಿಪ್ ನಿರ್ಮಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧರಿಸಿದೆ.</p>.<p>ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಬಿಡಿಎ ಆಡಳಿತ ಮಂಡಳಿ ಸಭೆಯಲ್ಲಿ ಈ ಯೋಜನೆಗೆ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು.</p>.<p>ಸಭೆಯ ನಿರ್ಧಾರಗಳ ಬಗ್ಗೆ ಪ್ರತಿಕ್ರಿಯಿಸಿದ ವಿಶ್ವನಾಥ್, ‘ಖಾಸಗಿ ಸಹಭಾಗಿತ್ವದಲ್ಲಿ ಈ ಟೌನ್ ಶಿಪ್ ನಿರ್ಮಿಸಲು ಉದ್ದೇಶಿಸಲಾಗಿದೆ. 4 ಬಿಎಚ್ಕೆ ಮನೆಗಳಿರುವ ಅಪಾರ್ಟ್ಮೆಂಟ್ ಸಮುಚ್ಚಯಗಳು, ವಾಣಿಜ್ಯ ಸಂಕೀರ್ಣಗಳು, ಮನೋರಂಜನಾ ತಾಣ, ವ್ಯಾಯಾಮ ಘಟಕಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗುತ್ತದೆ. ಖಾಸಗಿ ಟೌನ್ ಶಿಪ್ಗೆ ಸರಿಸಮನಾದ ಸೌಲಭ್ಯಗಳನ್ನು ಇಲ್ಲಿ ಒದಗಿಸಲಿದ್ದೇವೆ. ಈ ಯೋಜನೆಗೆ ಸರ್ಕಾರದ ಅನುಮೋದನೆ ಸಿಕ್ಕಿದ ತಕ್ಷಣವೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಬಿಡಿಎ ರಚಿಸಿರುವ 64 ಬಡಾವಣೆಗಳಲ್ಲಿ ಲಭ್ಯವಿರುವ ಜಮೀನುಗಳ ಪರಿಶೋಧನೆ (ಲ್ಯಾಂಡ್ ಆಡಿಟ್) ನಡೆಸಲಾಗಿದೆ. ಇವುಗಳಲ್ಲಿ 357 ಎಕರೆಗಳಷ್ಟು ಜಮೀನು ಹಂಚಿಕೆಯಾಗದೇ ಉಳಿದಿರುವುದು ಕಂಡುಬಂದಿದೆ. ಈ ಜಮೀನನ್ನು ಹರಾಜಿನ ಮೂಲಕ ಮಾರಾಟ ಮಾಡುವ ಪ್ರಸ್ತಾಪಕ್ಕೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು’ ಎಂದರು.</p>.<p>‘ಆಲೂರಿನಲ್ಲಿ ನಿರ್ಮಿಸಲಾಗಿರುವ 1 ಬಿಎಚ್ಕೆ ವಸತಿ ಸಮುಚ್ಚಯಕ್ಕೆ ಆವರಣ ಗೋಡೆ ನಿರ್ಮಾಣ ಮತ್ತು ಹತ್ತಿರದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ರಸ್ತೆಗಳ ನಿರ್ಮಾಣಕ್ಕೆ ₹ 1 ಕೋಟಿ ಮಂಜೂರು ಮಾಡಲು ಒಪ್ಪಿಗೆ ನೀಡಲಾಯಿತು’ ಎಂದು ಅವರು ಮಾಹಿತಿ ನೀಡಿದರು.</p>.<p>‘ಬನಶಂಕರಿ ಬಡಾವಣೆಯಲ್ಲಿ 100 ಅಡಿ ಮತ್ತು 80 ಅಡಿ ರಸ್ತೆಗಳ ಇಕ್ಕೆಲಗಳಲ್ಲಿ ಇರುವ ಬೀದಿದೀಪಗಳ ಕಂಬಗಳನ್ನು ರಸ್ತೆಯ ಮಧ್ಯಭಾಗಕ್ಕೆ ಸ್ಥಳಾಂತರಿಸಿ ಹೊಸದಾಗಿ ಎಲ್ಇಡಿ ದೀಪಗಳನ್ನು ಅಳವಡಿಸಲಾಗುತ್ತದೆ. ಪ್ರಮುಖ ವೃತ್ತಗಳಲ್ಲಿ ಹೈ–ಮಾಸ್ಟ್ ದೀಪಗಳನ್ನು ಅಳವಡಿಸಲಾಗುತ್ತದೆ. ₹ 2.75 ಕೋಟಿ ವೆಚ್ಚದ ಈ ಕಾಮಗಾರಿಗಳಿಗೆ ಅನುಮೋದನೆ ನೀಡಲಾಯಿತು’ ಎಂದರು.</p>.<p>ಪ್ರಾಧಿಕಾರದ ಎಲ್ಲ ಚಟುವಟಿಕೆಗಳನ್ನು ಸಂಪೂರ್ಣವಾಗಿ ಕಂಪ್ಯೂಟರೀಕರಿಸಲು ಹೊಸ ತಂತ್ರಾಂಶ ಅಭಿವೃದ್ಧಿಪಡಿಸಲು ಟೆಂಡರ್ ಕರೆಯಲು ನಿರ್ಧರಿಸಲಾಗಿದೆ. ಖಾಲಿ ಇರುವ ಹುದ್ದೆಗಳಿಗೆ ಕೋವಿಡ್ ನಿಯಂತ್ರಣಕ್ಕೆ ಬಂದ ಬಳಿಕ ನೇಮಕಾತಿ ಮಾಡಿಕೊಳ್ಳಲು ಸಭೆ ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದೆ. ಪ್ರಾಧಿಕಾರದ 2021-22 ನೇ ಸಾಲಿನ ₹ 2,252 ಕೋಟಿ ಗಾತ್ರದ ಬಜೆಟ್ಗೂ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.</p>.<p class="Briefhead"><strong>ಪಿಆರ್ಆರ್– ಅನುಮೋದನೆ ಕೋರಲು ನಿರ್ಧಾರ</strong></p>.<p>‘ಬಹುನಿರೀಕ್ಷಿತ ಬೆಂಗಳೂರು ಪೆರಿಫರೆಲ್ ವರ್ತುಲ ರಸ್ತೆ ಯೋಜನೆಯ ಪರಿಷ್ಕೃತ ನೀಲನಕ್ಷೆಯನ್ನು ಬಿಡಿಎ ರೂಪಿಸಿದೆ. ಈ ಯೋಜನೆ ಅನುಷ್ಠಾನಕ್ಕೆ ದೇಶ–ವಿದೇಶಗಳ ಹಲವು ಕಂಪನಿಗಳು ಆಸಕ್ತಿ ತೋರಿರುವ ಕಾರಣ ಜಾಗತಿಕ ಟೆಂಡರ್ ಕರೆಯಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ’ ಎಂದು ವಿಶ್ವನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರು ಪೂರ್ವ ತಾಲ್ಲೂಕಿನ ಕೋನದಾಸಪುರದಲ್ಲಿ ಸುಸಜ್ಜಿತವಾದ ಬಹೂಪಯೋಗಿ ಟೌನ್ ಶಿಪ್ ನಿರ್ಮಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧರಿಸಿದೆ.</p>.<p>ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಬಿಡಿಎ ಆಡಳಿತ ಮಂಡಳಿ ಸಭೆಯಲ್ಲಿ ಈ ಯೋಜನೆಗೆ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು.</p>.<p>ಸಭೆಯ ನಿರ್ಧಾರಗಳ ಬಗ್ಗೆ ಪ್ರತಿಕ್ರಿಯಿಸಿದ ವಿಶ್ವನಾಥ್, ‘ಖಾಸಗಿ ಸಹಭಾಗಿತ್ವದಲ್ಲಿ ಈ ಟೌನ್ ಶಿಪ್ ನಿರ್ಮಿಸಲು ಉದ್ದೇಶಿಸಲಾಗಿದೆ. 4 ಬಿಎಚ್ಕೆ ಮನೆಗಳಿರುವ ಅಪಾರ್ಟ್ಮೆಂಟ್ ಸಮುಚ್ಚಯಗಳು, ವಾಣಿಜ್ಯ ಸಂಕೀರ್ಣಗಳು, ಮನೋರಂಜನಾ ತಾಣ, ವ್ಯಾಯಾಮ ಘಟಕಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗುತ್ತದೆ. ಖಾಸಗಿ ಟೌನ್ ಶಿಪ್ಗೆ ಸರಿಸಮನಾದ ಸೌಲಭ್ಯಗಳನ್ನು ಇಲ್ಲಿ ಒದಗಿಸಲಿದ್ದೇವೆ. ಈ ಯೋಜನೆಗೆ ಸರ್ಕಾರದ ಅನುಮೋದನೆ ಸಿಕ್ಕಿದ ತಕ್ಷಣವೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಬಿಡಿಎ ರಚಿಸಿರುವ 64 ಬಡಾವಣೆಗಳಲ್ಲಿ ಲಭ್ಯವಿರುವ ಜಮೀನುಗಳ ಪರಿಶೋಧನೆ (ಲ್ಯಾಂಡ್ ಆಡಿಟ್) ನಡೆಸಲಾಗಿದೆ. ಇವುಗಳಲ್ಲಿ 357 ಎಕರೆಗಳಷ್ಟು ಜಮೀನು ಹಂಚಿಕೆಯಾಗದೇ ಉಳಿದಿರುವುದು ಕಂಡುಬಂದಿದೆ. ಈ ಜಮೀನನ್ನು ಹರಾಜಿನ ಮೂಲಕ ಮಾರಾಟ ಮಾಡುವ ಪ್ರಸ್ತಾಪಕ್ಕೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು’ ಎಂದರು.</p>.<p>‘ಆಲೂರಿನಲ್ಲಿ ನಿರ್ಮಿಸಲಾಗಿರುವ 1 ಬಿಎಚ್ಕೆ ವಸತಿ ಸಮುಚ್ಚಯಕ್ಕೆ ಆವರಣ ಗೋಡೆ ನಿರ್ಮಾಣ ಮತ್ತು ಹತ್ತಿರದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ರಸ್ತೆಗಳ ನಿರ್ಮಾಣಕ್ಕೆ ₹ 1 ಕೋಟಿ ಮಂಜೂರು ಮಾಡಲು ಒಪ್ಪಿಗೆ ನೀಡಲಾಯಿತು’ ಎಂದು ಅವರು ಮಾಹಿತಿ ನೀಡಿದರು.</p>.<p>‘ಬನಶಂಕರಿ ಬಡಾವಣೆಯಲ್ಲಿ 100 ಅಡಿ ಮತ್ತು 80 ಅಡಿ ರಸ್ತೆಗಳ ಇಕ್ಕೆಲಗಳಲ್ಲಿ ಇರುವ ಬೀದಿದೀಪಗಳ ಕಂಬಗಳನ್ನು ರಸ್ತೆಯ ಮಧ್ಯಭಾಗಕ್ಕೆ ಸ್ಥಳಾಂತರಿಸಿ ಹೊಸದಾಗಿ ಎಲ್ಇಡಿ ದೀಪಗಳನ್ನು ಅಳವಡಿಸಲಾಗುತ್ತದೆ. ಪ್ರಮುಖ ವೃತ್ತಗಳಲ್ಲಿ ಹೈ–ಮಾಸ್ಟ್ ದೀಪಗಳನ್ನು ಅಳವಡಿಸಲಾಗುತ್ತದೆ. ₹ 2.75 ಕೋಟಿ ವೆಚ್ಚದ ಈ ಕಾಮಗಾರಿಗಳಿಗೆ ಅನುಮೋದನೆ ನೀಡಲಾಯಿತು’ ಎಂದರು.</p>.<p>ಪ್ರಾಧಿಕಾರದ ಎಲ್ಲ ಚಟುವಟಿಕೆಗಳನ್ನು ಸಂಪೂರ್ಣವಾಗಿ ಕಂಪ್ಯೂಟರೀಕರಿಸಲು ಹೊಸ ತಂತ್ರಾಂಶ ಅಭಿವೃದ್ಧಿಪಡಿಸಲು ಟೆಂಡರ್ ಕರೆಯಲು ನಿರ್ಧರಿಸಲಾಗಿದೆ. ಖಾಲಿ ಇರುವ ಹುದ್ದೆಗಳಿಗೆ ಕೋವಿಡ್ ನಿಯಂತ್ರಣಕ್ಕೆ ಬಂದ ಬಳಿಕ ನೇಮಕಾತಿ ಮಾಡಿಕೊಳ್ಳಲು ಸಭೆ ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದೆ. ಪ್ರಾಧಿಕಾರದ 2021-22 ನೇ ಸಾಲಿನ ₹ 2,252 ಕೋಟಿ ಗಾತ್ರದ ಬಜೆಟ್ಗೂ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.</p>.<p class="Briefhead"><strong>ಪಿಆರ್ಆರ್– ಅನುಮೋದನೆ ಕೋರಲು ನಿರ್ಧಾರ</strong></p>.<p>‘ಬಹುನಿರೀಕ್ಷಿತ ಬೆಂಗಳೂರು ಪೆರಿಫರೆಲ್ ವರ್ತುಲ ರಸ್ತೆ ಯೋಜನೆಯ ಪರಿಷ್ಕೃತ ನೀಲನಕ್ಷೆಯನ್ನು ಬಿಡಿಎ ರೂಪಿಸಿದೆ. ಈ ಯೋಜನೆ ಅನುಷ್ಠಾನಕ್ಕೆ ದೇಶ–ವಿದೇಶಗಳ ಹಲವು ಕಂಪನಿಗಳು ಆಸಕ್ತಿ ತೋರಿರುವ ಕಾರಣ ಜಾಗತಿಕ ಟೆಂಡರ್ ಕರೆಯಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ’ ಎಂದು ವಿಶ್ವನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>