ಕೊಡಿಗೇಹಳ್ಳಿ ಗ್ರಾಮದ ಸರ್ವೇ ನಂ. 108 ರಲ್ಲಿನ 5 ಎಕರೆ ಪ್ರದೇಶವನ್ನು ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಅದರಲ್ಲಿ 3 ಎಕರೆ 35 ಗುಂಟೆಯಲ್ಲಿ ಕಂದಾಯ ನಿವೇಶನಗಳನ್ನು ರಚಿಸಲಾಗುತ್ತಿತ್ತು. ಅನಧಿಕೃತ ಕಟ್ಟಡ ನಿರ್ಮಿಸುತ್ತಿದ್ದವರಿಗೆ ಅನೇಕ ಬಾರಿ ನೋಟಿಸ್ ನೀಡಿದ್ದರೂ ನಿರ್ಮಾಣ ಕಾರ್ಯ ಮುಂದುವರಿಸಲಾಗಿತ್ತು. ಮಂಗಳವಾರ ಬೆಳಿಗ್ಗೆ ನಡೆದ ಕಾರ್ಯಾಚರಣೆಯಲ್ಲಿ 7 ಶೆಡ್ ಹಾಗೂ 3 ಕಾಂಕ್ರೀಟ್ ಕಟ್ಟಡ ತೆರವುಗೊಳಿಸಲಾಯಿತು. ಪ್ರಾಧಿಕಾರ ಸುಮಾರು ₹ 25 ಕೋಟಿ ಮೌಲ್ಯದ ಆಸ್ತಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿತು. ಅಲ್ಲದೇ ಒತ್ತುವರಿದಾರರ ವಿರುದ್ಧ ಭೂಕಬಳಿಕೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.