ಬಿಡಿಎ ಅಧಿಕಾರಿಗಳೊಂದಿಗೆ ಬಡಾವಣೆಯ ಕಾಮಗಾರಿಯನ್ನು ಸೋಮವಾರ ಪರಿಶೀಲನೆ ನಡೆಸಿ ಮಾತನಾಡಿದ ಅವರು, ‘ಕೋವಿಡ್ ಮತ್ತು ಇತರೆ ಕಾರಣಗಳಿಂದ ಬಡಾವಣೆ ಕಾಮಗಾರಿಗೆ ಹಿನ್ನಡೆ ಉಂಟಾಗಿತ್ತು. ಇದೀಗ ಪರಿಸ್ಥಿತಿ ಸುಧಾರಣೆಯಾಗಿದ್ದು, ಕಾಮಗಾರಿಗಳನ್ನು ಕ್ಷಿಪ್ರ ಗತಿಯಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಗಿದೆ’ ಎಂದು ತಿಳಿಸಿದರು.