ಈ ಕುರಿತಂತೆ ವಕೀಲ ಎ.ಎಸ್.ಹರೀಶ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ಪ್ರಕಟಿಸಿತು. ‘ಅರ್ಜಿದಾರರ ಮನವಿ ರಾಜ್ಯಪಾಲರ ಪರಿಶೀಲನೆಯಲ್ಲಿದ್ದು, ರಾಜ್ಯಪಾಲರ ಕಚೇರಿಗೆ ನಿರ್ದೇಶನ ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಹೇಳಿದೆ.