’ನಕಲಿ ದಾಖಲೆ ಸೃಷ್ಟಿಸಿ ಬಿಡಿಎದಿಂದ ಪರಿಹಾರ ಪಡೆದಿರುವ ಪ್ರಕರಣಗಳು ಮತ್ತು ಮೂಲೆ ನಿವೇಶನಗಳನ್ನು ಸಾಮಾನ್ಯ ನಿವೇಶನಗಳನ್ನಾಗಿ ಪರಿವರ್ತಿಸಿ ಮಾರಾಟ ಮಾಡುತ್ತಿರುವ ಜಾಲ ಸೇರಿದಂತೆ ಇನ್ನಿತರೆ ಅಕ್ರಮ ಪ್ರಕರಣಗಳನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಬಿಡಿಎಯಿಂದ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆಯನ್ನು ಒಂದೆರಡು ದಿನಗಳಲ್ಲಿ ಸಲ್ಲಿಸಲಿದ್ದು, ಆದಷ್ಟೂ ಬೇಗ ತನಿಖೆ ಆರಂಭವಾಗಲಿದೆ' ಎಂದು ತಿಳಿಸಿದರು.