<p><strong>ಬೆಂಗಳೂರು: </strong>ಆಲೂರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಿರುವ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ತ್ಯಾಜ್ಯನೀರು ಶುದ್ಧೀಕರಣ ಘಟಕ (ಎಸ್ಟಿಪಿ) ನಿರ್ಮಿಸಲು ₹ 3.5 ಕೋಟಿ ಅನುದಾನ ಒದಗಿಸುವುದಾಗಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.</p>.<p>ಅವರು ಆಲೂರಿನಲ್ಲಿ ಬಿಡಿಎ ನಿರ್ಮಿಸಿರುವ ಅಪಾರ್ಟ್ಮೆಂಟ್ ಸಮುಚ್ಚಯಗಳಿಗೆ ಶನಿವಾರ ಭೇಟಿ ನೀಡಿ ನಿವಾಸಿಗಳ ಅಹವಾಲು ಆಲಿಸಿದರು. </p>.<p>‘ಆಲೂರಿನ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ಮೂಲಸೌಕರ್ಯವನ್ನು ಆದ್ಯತೆ ಮೇಲೆ ಪೂರೈಸಲಾಗುತ್ತದೆ. ಈ ಬಗ್ಗೆ ಮುಂದಿನ ವಾರ ನಡೆಯಲಿರುವ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಮೂಲಸೌಕರ್ಯ ಕೊರತೆ ಬಗ್ಗೆ ಬಿಡಿಎ ಆಯುಕ್ತರ ಜತೆ ಚರ್ಚಿಸುತ್ತೇನೆ. ಎಸ್ಟಿಪಿಯ ಟೆಂಡರ್ ಪ್ರಕ್ರಿಯೆಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಕಾಮಗಾರಿಯನ್ನೂ ಶೀಘ್ರವೇ ಆರಂಭಿಸಲು ಸೂಚಿಸುತ್ತೇನೆ’ ಎಂದರು.</p>.<p>ಇಲ್ಲಿನ 1 ಬಿಎಚ್ಕೆ ಫ್ಲ್ಯಾಟ್ ಗಳಲ್ಲಿ ನೀರು ಸೋರಿಕೆ ಆಗುತ್ತಿದೆ. ಈ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿಲ್ಲ ಎಂದು ನಿವಾಸಿಗಳು ಅಹವಾಲು ತೋಡಿಕೊಂಡರು.</p>.<p>‘ಪ್ರತಿಯೊಂದು ಫ್ಲ್ಯಾಟ್ಗೂ ಪ್ರತ್ಯೇಕ ತೊಟ್ಟಿ ಅಳವಡಿಸುವಂತೆ ಬಿಡಿಎ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನೀರು ಸೋರಿಕೆ ತಡೆಯಲು ದುರಸ್ತಿ ಕಾಮಗಾರಿಯನ್ನು ತಕ್ಷಣವೇ ಆರಂಭಿಸುವಂತೆ ತಾಕೀತು ಮಾಡಿದರು.</p>.<p>ಹುಣ್ಣಿಗೆರೆ ವಸತಿ ಯೋಜನೆ ಪ್ರದೇಶಕ್ಕೂ ಭೇಟಿ ನೀಡಿದ ಅಧ್ಯಕ್ಷರು ಅಲ್ಲಿನ ಅಪಾರ್ಟ್ಮೆಂಟ್ ಸಮುಚ್ಚಯ ಹಾಗೂ ಸ್ವತಂತ್ರ ವಿಲ್ಲಾ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿದರು.</p>.<p>‘ಬಿಡಿಎ ಪಾಲಿಗೆ ಇದು ಮಹತ್ವಾಕಾಂಕ್ಷಿ ಮತ್ತು ಮಾದರಿ ಯೋಜನೆ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ವಸತಿ ಹಂಚಿಕೆಗೆ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ತಿಳಿಸಿದರು.</p>.<p><strong>ಆವರಣ ಗೋಡೆ ನಿರ್ಮಾಣಕ್ಕೆ ತಕರಾರು–ಇತ್ಯರ್ಥ</strong></p>.<p>ಆಲೂರಿನ ಬಿಡಿಎ ಅಪಾರ್ಟ್ಮೆಂಟ್ ಸಮುಚ್ಚಯದ ಆವರಣದಲ್ಲಿ ತಡೆಗೋಡೆ ನಿರ್ಮಿಸಲು ಭೂಮಾಲೀಕರೊಬ್ಬರು ತಕರಾರು ತೆಗೆದು, ಪ್ರಕರಣವನ್ನೂ ದಾಖಲಿಸಿದ್ದಾರೆ. ಅಪಾರ್ಟ್ಮೆಂಟ್ ಸಮುಚ್ಚಯದ ನಿವಾಸಿಗಳು ಈ ವಿಚಾರವನ್ನು ಬಿಡಿಎ ಅಧ್ಯಕ್ಷರ ಗಮನಕ್ಕೆ ತಂದರು. ತಕರಾರು ತೆಗದಿರುವ ರೈತರನ್ನು ತಕ್ಷಣವೇ ಕರೆಯಿಸಿದ ಅಧ್ಯಕ್ಷರು ಆವರಣ ಗೋಡೆ ನಿರ್ಮಿಸಲು ಅವಕಾಶ ಮಾಡಿಕೊಡುವಂತೆ ಕೋರಿದರು. ಇದಕ್ಕೆ ಸಮ್ಮತಿಸಿದ ರೈತ ಜಂಟಿ ಸರ್ವೆ ನಡೆಸಿದ ನಂತರ ಭೂಮಿಯನ್ನು ಬಿಟ್ಟುಕೊಡುವುದಾಗಿ ವಾಗ್ದಾನ ಮಾಡಿದರು.</p>.<p>ಕಂದಾಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ವಾರದೊಳಗೆ ಜಂಟಿ ಸರ್ವೆ ನಡೆಸಿ ಗೋಡೆ ನಿರ್ಮಾಣ ಆರಂಭಿಸುವಂತೆ ಅಧಿಕಾರಿಗಳಿಗೆ ವಿಶ್ವನಾಥ್ ಸೂಚನೆ ನೀಡಿದರು. ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ರಸ್ತೆ ನಿರ್ಮಾಣ, ಉದ್ಯಾನ ಮತ್ತು ಮಕ್ಕಳಿಗೆ ಆಟೋಟ ಚಟುವಟಿಕೆಗೆ ಪರಿಕರಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಆಲೂರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಿರುವ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ತ್ಯಾಜ್ಯನೀರು ಶುದ್ಧೀಕರಣ ಘಟಕ (ಎಸ್ಟಿಪಿ) ನಿರ್ಮಿಸಲು ₹ 3.5 ಕೋಟಿ ಅನುದಾನ ಒದಗಿಸುವುದಾಗಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.</p>.<p>ಅವರು ಆಲೂರಿನಲ್ಲಿ ಬಿಡಿಎ ನಿರ್ಮಿಸಿರುವ ಅಪಾರ್ಟ್ಮೆಂಟ್ ಸಮುಚ್ಚಯಗಳಿಗೆ ಶನಿವಾರ ಭೇಟಿ ನೀಡಿ ನಿವಾಸಿಗಳ ಅಹವಾಲು ಆಲಿಸಿದರು. </p>.<p>‘ಆಲೂರಿನ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ಮೂಲಸೌಕರ್ಯವನ್ನು ಆದ್ಯತೆ ಮೇಲೆ ಪೂರೈಸಲಾಗುತ್ತದೆ. ಈ ಬಗ್ಗೆ ಮುಂದಿನ ವಾರ ನಡೆಯಲಿರುವ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಮೂಲಸೌಕರ್ಯ ಕೊರತೆ ಬಗ್ಗೆ ಬಿಡಿಎ ಆಯುಕ್ತರ ಜತೆ ಚರ್ಚಿಸುತ್ತೇನೆ. ಎಸ್ಟಿಪಿಯ ಟೆಂಡರ್ ಪ್ರಕ್ರಿಯೆಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಕಾಮಗಾರಿಯನ್ನೂ ಶೀಘ್ರವೇ ಆರಂಭಿಸಲು ಸೂಚಿಸುತ್ತೇನೆ’ ಎಂದರು.</p>.<p>ಇಲ್ಲಿನ 1 ಬಿಎಚ್ಕೆ ಫ್ಲ್ಯಾಟ್ ಗಳಲ್ಲಿ ನೀರು ಸೋರಿಕೆ ಆಗುತ್ತಿದೆ. ಈ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿಲ್ಲ ಎಂದು ನಿವಾಸಿಗಳು ಅಹವಾಲು ತೋಡಿಕೊಂಡರು.</p>.<p>‘ಪ್ರತಿಯೊಂದು ಫ್ಲ್ಯಾಟ್ಗೂ ಪ್ರತ್ಯೇಕ ತೊಟ್ಟಿ ಅಳವಡಿಸುವಂತೆ ಬಿಡಿಎ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನೀರು ಸೋರಿಕೆ ತಡೆಯಲು ದುರಸ್ತಿ ಕಾಮಗಾರಿಯನ್ನು ತಕ್ಷಣವೇ ಆರಂಭಿಸುವಂತೆ ತಾಕೀತು ಮಾಡಿದರು.</p>.<p>ಹುಣ್ಣಿಗೆರೆ ವಸತಿ ಯೋಜನೆ ಪ್ರದೇಶಕ್ಕೂ ಭೇಟಿ ನೀಡಿದ ಅಧ್ಯಕ್ಷರು ಅಲ್ಲಿನ ಅಪಾರ್ಟ್ಮೆಂಟ್ ಸಮುಚ್ಚಯ ಹಾಗೂ ಸ್ವತಂತ್ರ ವಿಲ್ಲಾ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿದರು.</p>.<p>‘ಬಿಡಿಎ ಪಾಲಿಗೆ ಇದು ಮಹತ್ವಾಕಾಂಕ್ಷಿ ಮತ್ತು ಮಾದರಿ ಯೋಜನೆ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ವಸತಿ ಹಂಚಿಕೆಗೆ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ತಿಳಿಸಿದರು.</p>.<p><strong>ಆವರಣ ಗೋಡೆ ನಿರ್ಮಾಣಕ್ಕೆ ತಕರಾರು–ಇತ್ಯರ್ಥ</strong></p>.<p>ಆಲೂರಿನ ಬಿಡಿಎ ಅಪಾರ್ಟ್ಮೆಂಟ್ ಸಮುಚ್ಚಯದ ಆವರಣದಲ್ಲಿ ತಡೆಗೋಡೆ ನಿರ್ಮಿಸಲು ಭೂಮಾಲೀಕರೊಬ್ಬರು ತಕರಾರು ತೆಗೆದು, ಪ್ರಕರಣವನ್ನೂ ದಾಖಲಿಸಿದ್ದಾರೆ. ಅಪಾರ್ಟ್ಮೆಂಟ್ ಸಮುಚ್ಚಯದ ನಿವಾಸಿಗಳು ಈ ವಿಚಾರವನ್ನು ಬಿಡಿಎ ಅಧ್ಯಕ್ಷರ ಗಮನಕ್ಕೆ ತಂದರು. ತಕರಾರು ತೆಗದಿರುವ ರೈತರನ್ನು ತಕ್ಷಣವೇ ಕರೆಯಿಸಿದ ಅಧ್ಯಕ್ಷರು ಆವರಣ ಗೋಡೆ ನಿರ್ಮಿಸಲು ಅವಕಾಶ ಮಾಡಿಕೊಡುವಂತೆ ಕೋರಿದರು. ಇದಕ್ಕೆ ಸಮ್ಮತಿಸಿದ ರೈತ ಜಂಟಿ ಸರ್ವೆ ನಡೆಸಿದ ನಂತರ ಭೂಮಿಯನ್ನು ಬಿಟ್ಟುಕೊಡುವುದಾಗಿ ವಾಗ್ದಾನ ಮಾಡಿದರು.</p>.<p>ಕಂದಾಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ವಾರದೊಳಗೆ ಜಂಟಿ ಸರ್ವೆ ನಡೆಸಿ ಗೋಡೆ ನಿರ್ಮಾಣ ಆರಂಭಿಸುವಂತೆ ಅಧಿಕಾರಿಗಳಿಗೆ ವಿಶ್ವನಾಥ್ ಸೂಚನೆ ನೀಡಿದರು. ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ರಸ್ತೆ ನಿರ್ಮಾಣ, ಉದ್ಯಾನ ಮತ್ತು ಮಕ್ಕಳಿಗೆ ಆಟೋಟ ಚಟುವಟಿಕೆಗೆ ಪರಿಕರಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>