ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ತಮ್ಮ ವಿರುದ್ದ ಮಾತನಾಡಿದವರ ಯಾವ ಕೆಲಸವನ್ನೂ ಅವರು ಮಾಡಿಕೊಡುವುದಿಲ್ಲ. ಆದರೆ, ಚಿತ್ರನಟಿಯೊಬ್ಬರು ಹೇಳುವ ಕೆಲಸವನ್ನು ಮಾತ್ರ ಮಾಡಿಕೊಡುತ್ತಾರೆ. ಖಾಸಗಿ ಹೋಟೆಲ್ಗೆ ಬಿಡಿಎ ದಾಖಲೆ ತರಿಸಿಕೊಂಡು ಪರಿಶೀಲಿಸುತ್ತಾರೆ. ಬಾಲು ಎಂಬ ಏಜೆಂಟ್ ಮೂಲಕ ಕೆಲಸ ಮಾಡುತ್ತಿದ್ದಾರೆ. 10 ಕಡತಗಳನ್ನು ವಿಲೇವಾರಿ ಮಾಡಲು ಅಶೋಕ್ ಹೋಟೆಲ್ನಲ್ಲಿ ಕೊಠಡಿ ಕಾಯ್ದಿರಿಸಿದ ಬಗ್ಗೆ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಬಂದಿದೆ’ ಎಂದು ಆಯುಕ್ತರ ವಿರುದ್ಧ ಆರೋಪ ಮಾಡಿದರು.