ಜಾನುವಾರುಗಳಿಗೂ ಮೇವಿನ ಪರಿಹಾರ ನೀಡುತ್ತಿಲ್ಲ. ಬಡಾವಣೆ ನಿರ್ಮಾಣ ಕಾರ್ಯವು ಸುಪ್ರೀಂ ಕೋರ್ಟ್ ನೇಮಿಸಿರುವ ಸಮಿತಿಯ ಮೇಲು ಉಸ್ತುವಾರಿ ಹಾಗೂ ರೈತರ ಸಹಭಾಗಿತ್ವದಲ್ಲಿ ಅನುಷ್ಠಾನಗೊಳ್ಳಬೇಕಿತ್ತು. ಕಳೆದ ಫೆ.24 ರಂದು ಈಚೆಗೆ ಬಿಡಿಎ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡದೇ ಜೆಸಿಬಿ ಯಂತ್ರದೊಂದಿಗೆ ಬಂದು ಬೆಳೆನಾಶ ಪಡಿಸಿ ಜಮೀನು ಸ್ವಾಧೀನಕ್ಕೆ ಪಡೆದುಕೊಂಡರು. ಕೃಷಿ ಹಾಗೂ ಹೈನುಗಾರಿಕೆಯನ್ನೇ ನಂಬಿದ್ದ ರೈತರು ಈಗ ಬೀದಿಗೆ ಬಿದ್ದಿದ್ದಾರೆ. ಅವರಿಗೆ ಪುನರ್ ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.