ಬೆಂಗಳೂರು: ಕರ್ತವ್ಯದ ವೇಳೆ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ ಸಹಾಯಕ ಎಂಜಿನಿಯರ್ಗಳಾದ ಎಂ.ಎಸ್. ಶಂಕರಮೂರ್ತಿ, ಡಿ.ಎಂ. ನಾರಾಯಣಸ್ವಾಮಿ ಹಾಗೂ ಆಕೃತಿ ರಚನಕಾರ ಜೆ. ಮುರುಳೀಧರ್ ಅವರನ್ನು ಅಮಾನತುಗೊಳಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತ ಜಿ.ಸಿ.ಪ್ರಕಾಶ್ ಗುರುವಾರ ಆದೇಶ ಹೊರಡಿಸಿದ್ದಾರೆ.