<p><strong>ಬೆಂಗಳೂರು:</strong> ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಾಗಗಳ ಒತ್ತುವರಿಯನ್ನು ಆ.5ರ ನಂತರ ತೆರವುಗೊಳಿಸಲಾಗುವುದು’ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.</p>.<p>‘ಬಿಡಿಎ ಎಲ್ಲೆಲ್ಲಿ ಜಾಗಗಳನ್ನು ಹೊಂದಿದೆ ಎಂಬುದನ್ನು ಪರಿಶೀಲಿಸಲು ಕೈಗೆತ್ತಿಕೊಂಡಿರುವ ಲ್ಯಾಂಡ್ ಆಡಿಟ್ ಕಾರ್ಯ ಪ್ರಗತಿಯಲ್ಲಿದೆ. ಪ್ರಾಧಿಕಾರಕ್ಕೆ ಸೇರಿದ ಆಸ್ತಿಯನ್ನು ಗುರುತಿಸಲಾಗುತ್ತಿದೆ. ಇದುವರೆಗೆ 11 ಸಾವಿರ ಎಕರೆಯಷ್ಟು ಪ್ರದೇಶ ಬಿಡಿಎಗೆ ಸೇರಿದೆ ಎಂದು ಇರುವರೆಗಿನ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ ಹಲವಾರು ಪ್ರಕರಣಗಳು ಭೂಸ್ವಾಧೀನ ಪ್ರಕ್ರಿಯೆಯ ವಿವಿಧ ಹಂತದಲ್ಲಿದ್ದರೆ, ಇನ್ನೂ ಕೆಲವು ಪ್ರಕರಣಗಳ ವ್ಯಾಜ್ಯವು ವಿವಿಧ ನ್ಯಾಯಾಲಯಗಳಲ್ಲಿದೆ’ ಎಂದು ಅವರು ವಿವರಿಸಿದರು.</p>.<p>‘ಪ್ರಾಧಿಕಾರಕ್ಕೆ ಸೇರಿದ ಆಸ್ತಿಯ ಪೈಕಿ 500 ಎಕರೆಯಷ್ಟು ಪ್ರದೇಶಗಳನ್ನು ವಿವಿಧ ಬಡಾವಣೆಗಳಲ್ಲಿ ಗುರುತಿಸಿದ್ದೇವೆ. ಈ ಭೂಮಿಯ ಬಗ್ಗೆ ನ್ಯಾಯಾಲಯಗಳು ಬಿಡಿಎ ಪರ ತೀರ್ಪು ನೀಡಿದ್ದು, ತೆರವುಗೊಳಿಸಲು ಹಸಿರು ನಿಶಾನೆ ನೀಡಿವೆ. ಆದರೆ, ಅಕ್ರಮವಾಗಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಜುಲೈ 5 ರವರೆಗೆ ನೆಲಸಮ ಮಾಡಬಾರದು ಎಂದು ನ್ಯಾಯಾಲಯವು ಆದೇಶ ನೀಡಿತ್ತು. ಈ ಗಡುವನ್ನು ಆ. 5 ರವರೆಗೆ ಮತ್ತೆ ವಿಸ್ತರಣೆ ಮಾಡಿದೆ. ಈ ಗಡುವಿನ ಬಗ್ಗೆ ನ್ಯಾಯಾಲಯ ಮುಂದಿನ ಆದೇಶ ನೀಡಿದ ನಂತರ ನೆಲಸಮ ಪ್ರಕ್ರಿಯೆಯನ್ನು ಆರಂಭ ಮಾಡಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಬಿಡಿಎ ಭೂಸ್ವಾಧೀನ ಮಾಡಿಕೊಂಡಿರುವ ಜಾಗದಲ್ಲಿ ಸುಮಾರು 75 ಸಾವಿರಕ್ಕೂ ಅಧಿಕ ಮನೆಗಳನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದೆ. ಆದರೆ, ಈ ಮನೆಗಳನ್ನು ನೆಲಸಮ ಮಾಡುವುದು ಕಷ್ಟಸಾಧ್ಯ. ಹಾಗಾಗಿಆ ಪ್ರದೇಶದ ಮಾರ್ಗಸೂಚಿ ದರಕ್ಕೆ ಅನುಗುಣವಾಗಿ ದಂಡನಾ ಶುಲ್ಕ ಪಾವತಿಸಿಕೊಂಡು ಈ ಜಾಗಗಳನ್ನು ಅಲ್ಲಿ ನೆಲೆಸಿರುವವರಿಗೆ ಬಿಡಿಎ ಕಾಯ್ದೆಯ ಸೆಕ್ಷನ್ 38ಡಿ ಅಡಿಯಲ್ಲಿ ನೋಂದಣಿ ಮಾಡಿಕೊಡಲಾಗುತ್ತದೆ’ ಎಂದರು.</p>.<p>‘ಸಾರ್ವಜನಿಕರಿಗೆ ಹೊರೆ ಆಗುತ್ತದೆ ಎಂಬ ಉದ್ದೇಶದಿಂದ ದಂಡನಾ ಶುಲ್ಕವನ್ನು ಕಡಿಮೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಅಲ್ಲಿಂದ ಪ್ರತಿಕ್ರಿಯೆ ಬಂದ ನಂತರ ಸಕ್ರಮ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ’ ಎಂದು ಬಿಡಿಎ ಅಧ್ಯಕ್ಷರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಾಗಗಳ ಒತ್ತುವರಿಯನ್ನು ಆ.5ರ ನಂತರ ತೆರವುಗೊಳಿಸಲಾಗುವುದು’ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.</p>.<p>‘ಬಿಡಿಎ ಎಲ್ಲೆಲ್ಲಿ ಜಾಗಗಳನ್ನು ಹೊಂದಿದೆ ಎಂಬುದನ್ನು ಪರಿಶೀಲಿಸಲು ಕೈಗೆತ್ತಿಕೊಂಡಿರುವ ಲ್ಯಾಂಡ್ ಆಡಿಟ್ ಕಾರ್ಯ ಪ್ರಗತಿಯಲ್ಲಿದೆ. ಪ್ರಾಧಿಕಾರಕ್ಕೆ ಸೇರಿದ ಆಸ್ತಿಯನ್ನು ಗುರುತಿಸಲಾಗುತ್ತಿದೆ. ಇದುವರೆಗೆ 11 ಸಾವಿರ ಎಕರೆಯಷ್ಟು ಪ್ರದೇಶ ಬಿಡಿಎಗೆ ಸೇರಿದೆ ಎಂದು ಇರುವರೆಗಿನ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ ಹಲವಾರು ಪ್ರಕರಣಗಳು ಭೂಸ್ವಾಧೀನ ಪ್ರಕ್ರಿಯೆಯ ವಿವಿಧ ಹಂತದಲ್ಲಿದ್ದರೆ, ಇನ್ನೂ ಕೆಲವು ಪ್ರಕರಣಗಳ ವ್ಯಾಜ್ಯವು ವಿವಿಧ ನ್ಯಾಯಾಲಯಗಳಲ್ಲಿದೆ’ ಎಂದು ಅವರು ವಿವರಿಸಿದರು.</p>.<p>‘ಪ್ರಾಧಿಕಾರಕ್ಕೆ ಸೇರಿದ ಆಸ್ತಿಯ ಪೈಕಿ 500 ಎಕರೆಯಷ್ಟು ಪ್ರದೇಶಗಳನ್ನು ವಿವಿಧ ಬಡಾವಣೆಗಳಲ್ಲಿ ಗುರುತಿಸಿದ್ದೇವೆ. ಈ ಭೂಮಿಯ ಬಗ್ಗೆ ನ್ಯಾಯಾಲಯಗಳು ಬಿಡಿಎ ಪರ ತೀರ್ಪು ನೀಡಿದ್ದು, ತೆರವುಗೊಳಿಸಲು ಹಸಿರು ನಿಶಾನೆ ನೀಡಿವೆ. ಆದರೆ, ಅಕ್ರಮವಾಗಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಜುಲೈ 5 ರವರೆಗೆ ನೆಲಸಮ ಮಾಡಬಾರದು ಎಂದು ನ್ಯಾಯಾಲಯವು ಆದೇಶ ನೀಡಿತ್ತು. ಈ ಗಡುವನ್ನು ಆ. 5 ರವರೆಗೆ ಮತ್ತೆ ವಿಸ್ತರಣೆ ಮಾಡಿದೆ. ಈ ಗಡುವಿನ ಬಗ್ಗೆ ನ್ಯಾಯಾಲಯ ಮುಂದಿನ ಆದೇಶ ನೀಡಿದ ನಂತರ ನೆಲಸಮ ಪ್ರಕ್ರಿಯೆಯನ್ನು ಆರಂಭ ಮಾಡಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಬಿಡಿಎ ಭೂಸ್ವಾಧೀನ ಮಾಡಿಕೊಂಡಿರುವ ಜಾಗದಲ್ಲಿ ಸುಮಾರು 75 ಸಾವಿರಕ್ಕೂ ಅಧಿಕ ಮನೆಗಳನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದೆ. ಆದರೆ, ಈ ಮನೆಗಳನ್ನು ನೆಲಸಮ ಮಾಡುವುದು ಕಷ್ಟಸಾಧ್ಯ. ಹಾಗಾಗಿಆ ಪ್ರದೇಶದ ಮಾರ್ಗಸೂಚಿ ದರಕ್ಕೆ ಅನುಗುಣವಾಗಿ ದಂಡನಾ ಶುಲ್ಕ ಪಾವತಿಸಿಕೊಂಡು ಈ ಜಾಗಗಳನ್ನು ಅಲ್ಲಿ ನೆಲೆಸಿರುವವರಿಗೆ ಬಿಡಿಎ ಕಾಯ್ದೆಯ ಸೆಕ್ಷನ್ 38ಡಿ ಅಡಿಯಲ್ಲಿ ನೋಂದಣಿ ಮಾಡಿಕೊಡಲಾಗುತ್ತದೆ’ ಎಂದರು.</p>.<p>‘ಸಾರ್ವಜನಿಕರಿಗೆ ಹೊರೆ ಆಗುತ್ತದೆ ಎಂಬ ಉದ್ದೇಶದಿಂದ ದಂಡನಾ ಶುಲ್ಕವನ್ನು ಕಡಿಮೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಅಲ್ಲಿಂದ ಪ್ರತಿಕ್ರಿಯೆ ಬಂದ ನಂತರ ಸಕ್ರಮ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ’ ಎಂದು ಬಿಡಿಎ ಅಧ್ಯಕ್ಷರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>