ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಿಡಿಎ ಆಯುಕ್ತ ಜಿ. ಕುಮಾರ ನಾಯ್ಕ್ ಅಧಿಕಾರಿಗಳಿಗೆ ಈ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸೂಚಿಸಿದ್ದಾರೆ. ಅಲ್ಲದೆ, ‘ನಿಖರ ಅಳತೆ’ ನೀಡುವ ಅಧಿಕಾರವನ್ನು ಕಾರ್ಯಪಾಲಕ ಎಂಜಿನಿಯರ್ಗಳಿಂದ ಹಿಂಪಡೆದು, ಮೂರು ಸದಸ್ಯರ ಸಮಿತಿಗೆ ಈ ಜವಾಬ್ದಾರಿಯನ್ನು ವಹಿಸಲಾಗಿದೆ.