<p><strong>ರಾಜರಾಜೇಶ್ವರಿ ನಗರ:</strong> ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ) ಅಧ್ಯಕ್ಷ-ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಎಚ್.ಎನ್.ಅಶೋಕ್, ಎಂ.ರಮೇಶ್ ಅವರು ಅವಿರೋಧವಾಗಿ ಆಯ್ಕೆಯಾದರು.</p>.<p>ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಇಲಾಖೆ ಉಪ ನಿರ್ದೇಶಕ ಸಲೀಂ ಅವರು ಆಯ್ಕೆಯನ್ನು ಪ್ರಕಟಿಸಿದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಜಿಲ್ಲೆಗಳು ಈ ಬ್ಯಾಂಕ್ ವ್ಯಾಪ್ತಿಗೆ ಸೇರುತ್ತವೆ. </p>.<p>ಎಚ್.ಎನ್.ಅಶೋಕ್ ಮಾತನಾಡಿ, ‘ರೈತರು, ಸ್ತ್ರೀ ಶಕ್ತಿ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು, ಸ್ವಯಂ ಉದ್ಯೋಗ, ಗೃಹ ನಿರ್ಮಾಣ, ವಾಣಿಜ್ಯ ಸಂಕೀರ್ಣ, ವಾಹನ ಖರೀದಿ, ಪಶುಸಂಗೋಪನೆ ಚಟುವಟಿಕೆಗೆ ಶೇ 3ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು’ ಎಂದರು.</p>.<p>ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರ ಸಹೋದರ ಅಶೋಕ್ ಅವರು ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ನಿರ್ದೇಶಕರಾದ ಎಂ.ಡಿ.ವಿಜಯದೇವ್, ವೈ.ಎಚ್.ಮಂಜು, ಕೃಷ್ಣಮೂರ್ತಿ, ಹಾಪ್ಕಾಮ್ಸ್ ಮಾಜಿ ಅಧ್ಯಕ್ಷ ಬಾಬು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ:</strong> ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ) ಅಧ್ಯಕ್ಷ-ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಎಚ್.ಎನ್.ಅಶೋಕ್, ಎಂ.ರಮೇಶ್ ಅವರು ಅವಿರೋಧವಾಗಿ ಆಯ್ಕೆಯಾದರು.</p>.<p>ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಇಲಾಖೆ ಉಪ ನಿರ್ದೇಶಕ ಸಲೀಂ ಅವರು ಆಯ್ಕೆಯನ್ನು ಪ್ರಕಟಿಸಿದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಜಿಲ್ಲೆಗಳು ಈ ಬ್ಯಾಂಕ್ ವ್ಯಾಪ್ತಿಗೆ ಸೇರುತ್ತವೆ. </p>.<p>ಎಚ್.ಎನ್.ಅಶೋಕ್ ಮಾತನಾಡಿ, ‘ರೈತರು, ಸ್ತ್ರೀ ಶಕ್ತಿ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು, ಸ್ವಯಂ ಉದ್ಯೋಗ, ಗೃಹ ನಿರ್ಮಾಣ, ವಾಣಿಜ್ಯ ಸಂಕೀರ್ಣ, ವಾಹನ ಖರೀದಿ, ಪಶುಸಂಗೋಪನೆ ಚಟುವಟಿಕೆಗೆ ಶೇ 3ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು’ ಎಂದರು.</p>.<p>ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರ ಸಹೋದರ ಅಶೋಕ್ ಅವರು ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ನಿರ್ದೇಶಕರಾದ ಎಂ.ಡಿ.ವಿಜಯದೇವ್, ವೈ.ಎಚ್.ಮಂಜು, ಕೃಷ್ಣಮೂರ್ತಿ, ಹಾಪ್ಕಾಮ್ಸ್ ಮಾಜಿ ಅಧ್ಯಕ್ಷ ಬಾಬು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>