‘ಕೋರ್ಟ್ ನಿರ್ಬಂಧವಿದ್ದರೂ ಆದೇಶ ಉಲ್ಲಂಘಿಸಿ ಮಿಟ್ಟಗಾನಹಳ್ಳಿ ಕ್ವಾರಿ ಪ್ರದೇಶದಲ್ಲಿ ಘನತ್ಯಾಜ್ಯ ಸುರಿಯಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ’ ಎಂಬ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್ಪಿಸಿಬಿ) ಹೇಳಿಕೆಗೆ ವ್ಯಗ್ರವಾದ ನ್ಯಾಯಪೀಠ,‘ಈ ಪ್ರಕರಣದಲ್ಲಿ ತ್ಯಾಜ್ಯ ವಿಲೇವಾರಿಗೆಅವಕಾಶ ನೀಡಿರುವ ಪಾಲಿಕೆ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲಾಗುವುದು. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತರು ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು’ ಎಂದು ತಾಕೀತು ಮಾಡಿದ್ದು, ವಿಚಾರಣೆಯನ್ನು ಮಾರ್ಚ್ 5ಕ್ಕೆ ಮುಂದೂಡಿದೆ.