<p><strong>ದಾಬಸ್ ಪೇಟೆ</strong>: ರೈತರ ತೋಟದ ರಕ್ಷಣೆಗೆ ಹಾಕಿದ್ದ ಮುಳ್ಳು ತಂತಿ ಬೇಲಿಗೆ ಸಿಲುಕಿಕೊಂಡ ಕರಡಿಯನ್ನು ನೆಲಮಂಗಲ ತಾಲ್ಲೂಕು ವಲಯ ಅರಣ್ಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.</p>.<p>ಶಿವಗಂಗೆ ತಪ್ಪಲಿಗೆ ಹೊಂದಿಕೊಂಡ ಕಂಬಾಳು ಗೊಲ್ಲರಹಟ್ಟಿ ರೈತರಾದ ಅಣ್ಣಯ್ಯಪ್ಪ ಹಾಗೂ ಚಿಟ್ಟಿಬಾಬು ಅವರ ತೋಟದ ತಂತಿ ಬೇಲಿಗೆ ಸಿಲುಕಿದ್ದ ಕರಡಿ ಬಿಡಿಸಿಕೊಳ್ಳಲು ಆಗದೆ ಇಡೀ ರಾತ್ರಿ ನರಳಿದೆ.</p>.<p>ಕರಡಿ ತಂತಿ ಬೇಲಿಗೆ ಸಿಲುಕಿರುವುದನ್ನು ಕಂಡ ಸಾರ್ವಜನಿಕರು ಅರಣ್ಯಇಲಾಖೆಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಕರಡಿಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದರು.</p>.<p>ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಸೈಯದ್ ನಿಜಾಮುದ್ದೀನ್, ದೊಡ್ಡಬಳ್ಳಾಪುರ ವಲಯ ಅರಣ್ಯ ಅಧಿಕಾರಿ ಮಂಜುನಾಥ್, ನೆಲಮಂಗಲ ಉಪವಲಯ ಅರಣ್ಯ ಅಧಿಕಾರಿ ಮಲ್ಲಿಕಾರ್ಜುನ್, ಪ್ರವೀಣ್ ಕುಮಾರ್ ಕೆ, ರಾಜು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ</strong>: ರೈತರ ತೋಟದ ರಕ್ಷಣೆಗೆ ಹಾಕಿದ್ದ ಮುಳ್ಳು ತಂತಿ ಬೇಲಿಗೆ ಸಿಲುಕಿಕೊಂಡ ಕರಡಿಯನ್ನು ನೆಲಮಂಗಲ ತಾಲ್ಲೂಕು ವಲಯ ಅರಣ್ಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.</p>.<p>ಶಿವಗಂಗೆ ತಪ್ಪಲಿಗೆ ಹೊಂದಿಕೊಂಡ ಕಂಬಾಳು ಗೊಲ್ಲರಹಟ್ಟಿ ರೈತರಾದ ಅಣ್ಣಯ್ಯಪ್ಪ ಹಾಗೂ ಚಿಟ್ಟಿಬಾಬು ಅವರ ತೋಟದ ತಂತಿ ಬೇಲಿಗೆ ಸಿಲುಕಿದ್ದ ಕರಡಿ ಬಿಡಿಸಿಕೊಳ್ಳಲು ಆಗದೆ ಇಡೀ ರಾತ್ರಿ ನರಳಿದೆ.</p>.<p>ಕರಡಿ ತಂತಿ ಬೇಲಿಗೆ ಸಿಲುಕಿರುವುದನ್ನು ಕಂಡ ಸಾರ್ವಜನಿಕರು ಅರಣ್ಯಇಲಾಖೆಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಕರಡಿಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದರು.</p>.<p>ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಸೈಯದ್ ನಿಜಾಮುದ್ದೀನ್, ದೊಡ್ಡಬಳ್ಳಾಪುರ ವಲಯ ಅರಣ್ಯ ಅಧಿಕಾರಿ ಮಂಜುನಾಥ್, ನೆಲಮಂಗಲ ಉಪವಲಯ ಅರಣ್ಯ ಅಧಿಕಾರಿ ಮಲ್ಲಿಕಾರ್ಜುನ್, ಪ್ರವೀಣ್ ಕುಮಾರ್ ಕೆ, ರಾಜು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>