<p><strong>ಬೆಂಗಳೂರು</strong>: ನಗರದಲ್ಲಿರುವ ಬ್ಯಾರಿ ಸಮುದಾಯದವರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಬ್ಯಾರಿಸ್ ಸೆಂಟ್ರಲ್ ಕಮಿಟಿ ಫೆ.1ರಂದು ಬೆಳಿಗ್ಗೆ 10 ಗಂಟೆಗೆ ಅರಮನೆ ಮೈದಾನದ ಶೃಂಗಾರ್ ಪ್ಯಾಲೇಸ್ನಲ್ಲಿ ‘ಬ್ಯಾರಿ ಕೂಟ’ ಹಮ್ಮಿಕೊಂಡಿದೆ.</p><p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಶಬೀರ್ ಬ್ರಿಗೇಡ್, ‘ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಒಟ್ಟು ₹ 10 ಲಕ್ಷ ವಿದ್ಯಾರ್ಥಿವೇತನವನ್ನು ಕಾರ್ಯಕ್ರಮದಲ್ಲಿ ವಿತರಿಸಲಾಗುತ್ತದೆ. ಆಂಬುಲೆನ್ಸ್ಗೆ ಕೂಡ ಚಾಲನೆ ನೀಡಲಾಗುತ್ತದೆ. ಸಮುದಾಯದ ಮಕ್ಕಳು, ಮಹಿಳೆಯರು ಹಾಗೂ ಯುವಜನರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.</p><p>‘ಬ್ಯಾರಿ ಕವಿಗೋಷ್ಠಿ, ಬ್ಯಾರಿ ಸಂಸ್ಕೃತಿ ಪ್ರತಿಬಿಂಬಿಸುವ ‘ಒಪ್ಪನೆ ಪಾಟ್’, ಬ್ಯಾರಿ ಕಲೆ ಬಿಂಬಿಸುವ ಎಕ್ಸ್ಪೋ, ಕರಾವಳಿಯ ತಿಂಡಿ–ತಿನಿಸುಗಳ ಆಹಾರ ಮೇಳ, ಉದ್ಯಮ ಸಮಾವೇಶ ಸೇರಿದಂತೆ ಸಮುದಾಯದವರಿಗೆ ವಿವಿಧ ಚಟುವಟಿಕೆಗಳು ಇರಲಿವೆ’ ಎಂದರು.</p><p>ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಸಿರ್ ಕೆಂಪಿ, ಉಪಾಧ್ಯಕ್ಷ ಗಫೂರ್, ಕೋಶಾಧಿಕಾರಿ ರಿಫಾಯಿ, ಸಂಘಟನಾ ಕಾರ್ಯದರ್ಶಿ ಅಥಾವುಲ್ಲ ಪೂಂಜಾಲಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿರುವ ಬ್ಯಾರಿ ಸಮುದಾಯದವರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಬ್ಯಾರಿಸ್ ಸೆಂಟ್ರಲ್ ಕಮಿಟಿ ಫೆ.1ರಂದು ಬೆಳಿಗ್ಗೆ 10 ಗಂಟೆಗೆ ಅರಮನೆ ಮೈದಾನದ ಶೃಂಗಾರ್ ಪ್ಯಾಲೇಸ್ನಲ್ಲಿ ‘ಬ್ಯಾರಿ ಕೂಟ’ ಹಮ್ಮಿಕೊಂಡಿದೆ.</p><p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಶಬೀರ್ ಬ್ರಿಗೇಡ್, ‘ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಒಟ್ಟು ₹ 10 ಲಕ್ಷ ವಿದ್ಯಾರ್ಥಿವೇತನವನ್ನು ಕಾರ್ಯಕ್ರಮದಲ್ಲಿ ವಿತರಿಸಲಾಗುತ್ತದೆ. ಆಂಬುಲೆನ್ಸ್ಗೆ ಕೂಡ ಚಾಲನೆ ನೀಡಲಾಗುತ್ತದೆ. ಸಮುದಾಯದ ಮಕ್ಕಳು, ಮಹಿಳೆಯರು ಹಾಗೂ ಯುವಜನರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.</p><p>‘ಬ್ಯಾರಿ ಕವಿಗೋಷ್ಠಿ, ಬ್ಯಾರಿ ಸಂಸ್ಕೃತಿ ಪ್ರತಿಬಿಂಬಿಸುವ ‘ಒಪ್ಪನೆ ಪಾಟ್’, ಬ್ಯಾರಿ ಕಲೆ ಬಿಂಬಿಸುವ ಎಕ್ಸ್ಪೋ, ಕರಾವಳಿಯ ತಿಂಡಿ–ತಿನಿಸುಗಳ ಆಹಾರ ಮೇಳ, ಉದ್ಯಮ ಸಮಾವೇಶ ಸೇರಿದಂತೆ ಸಮುದಾಯದವರಿಗೆ ವಿವಿಧ ಚಟುವಟಿಕೆಗಳು ಇರಲಿವೆ’ ಎಂದರು.</p><p>ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಸಿರ್ ಕೆಂಪಿ, ಉಪಾಧ್ಯಕ್ಷ ಗಫೂರ್, ಕೋಶಾಧಿಕಾರಿ ರಿಫಾಯಿ, ಸಂಘಟನಾ ಕಾರ್ಯದರ್ಶಿ ಅಥಾವುಲ್ಲ ಪೂಂಜಾಲಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>