<p><strong>ಬೆಂಗಳೂರು:</strong> ಹಾಸಿಗೆ ಬ್ಲಾಕಿಂಗ್ ದಂಧೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಅಧಿಕಾರಿಗಳು, ಅಕ್ರಮವಾಗಿ ಹಾಸಿಗೆಗಳನ್ನು ಬುಕ್ ಮಾಡುತ್ತಿದ್ದ ಮೂರು ಆಸ್ಪತ್ರೆಗಳನ್ನು ಪತ್ತೆ ಹಚ್ಚಿದ್ದಾರೆ.</p>.<p>‘ಸಿಸಿಬಿ ಅಧಿಕಾರಿಗಳು ಶೋಧಿಸಿರುವ ಮೂರೂ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಹಾಗೂ ‘ಆರೋಗ್ಯ ಮಿತ್ರ’ ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲು ತನಿಖೆ ಮುಂದುವರಿದಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.</p>.<p>ದಂಧೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ವೈದ್ಯರು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಿ, ಹಲವರನ್ನು ವಿಚಾರಣೆ ನಡೆಸಿದೆ. ತನಿಖೆ ಚುರುಕುಗೊಳಿಸಿದ್ದ ಸಿಸಿಬಿ ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿನಗರದ 16 ಆಸ್ಪತ್ರೆಗಳಲ್ಲಿ ಶನಿವಾರ ಶೋಧ ನಡೆಸಿದ್ದರು.</p>.<p><strong>4 ಖಾಸಗಿ ಬಸ್ ಜಪ್ತಿ<br />ಬೆಂಗಳೂರು:</strong> ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ನಾಲ್ಕು ಖಾಸಗಿ ಬಸ್ಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಭಾನುವಾರ ಜಪ್ತಿ ಮಾಡಿದ್ದಾರೆ.</p>.<p>‘ಲಾಕ್ಡೌನ್ ವೇಳೆಯಲ್ಲಿ ಯಾವುದೇ ಬಸ್ಗಳು ಕಾರ್ಯಾಚರಣೆ ನಡೆಸುವಂತಿಲ್ಲ. ಆದರೆ, ಕೆಲ ಖಾಸಗಿ ಬಸ್ಗಳು ಅಕ್ರಮವಾಗಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದವು’. </p>.<p>‘ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ನೇತೃತ್ವದ ತಂಡಗಳು ಬಾಗೇಪಲ್ಲಿ, ಅತ್ತಿಬೆಲೆ ಹಾಗೂ ಬಳ್ಳಾರಿ ರಸ್ತೆಯ ಎಸ್ಟೀಮ್ ಮಾಲ್ ಬಳಿಭಾನುವಾರ ದಾಳಿ ನಡೆಸಿದಾಗ ಒಟ್ಟು ನಾಲ್ಕು ಖಾಸಗಿ ಬಸ್ಗಳನ್ನು ಜಪ್ತಿ ಮಾಡಲಾಗಿದೆ‘ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಾಸಿಗೆ ಬ್ಲಾಕಿಂಗ್ ದಂಧೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಅಧಿಕಾರಿಗಳು, ಅಕ್ರಮವಾಗಿ ಹಾಸಿಗೆಗಳನ್ನು ಬುಕ್ ಮಾಡುತ್ತಿದ್ದ ಮೂರು ಆಸ್ಪತ್ರೆಗಳನ್ನು ಪತ್ತೆ ಹಚ್ಚಿದ್ದಾರೆ.</p>.<p>‘ಸಿಸಿಬಿ ಅಧಿಕಾರಿಗಳು ಶೋಧಿಸಿರುವ ಮೂರೂ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಹಾಗೂ ‘ಆರೋಗ್ಯ ಮಿತ್ರ’ ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲು ತನಿಖೆ ಮುಂದುವರಿದಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.</p>.<p>ದಂಧೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ವೈದ್ಯರು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಿ, ಹಲವರನ್ನು ವಿಚಾರಣೆ ನಡೆಸಿದೆ. ತನಿಖೆ ಚುರುಕುಗೊಳಿಸಿದ್ದ ಸಿಸಿಬಿ ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿನಗರದ 16 ಆಸ್ಪತ್ರೆಗಳಲ್ಲಿ ಶನಿವಾರ ಶೋಧ ನಡೆಸಿದ್ದರು.</p>.<p><strong>4 ಖಾಸಗಿ ಬಸ್ ಜಪ್ತಿ<br />ಬೆಂಗಳೂರು:</strong> ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ನಾಲ್ಕು ಖಾಸಗಿ ಬಸ್ಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಭಾನುವಾರ ಜಪ್ತಿ ಮಾಡಿದ್ದಾರೆ.</p>.<p>‘ಲಾಕ್ಡೌನ್ ವೇಳೆಯಲ್ಲಿ ಯಾವುದೇ ಬಸ್ಗಳು ಕಾರ್ಯಾಚರಣೆ ನಡೆಸುವಂತಿಲ್ಲ. ಆದರೆ, ಕೆಲ ಖಾಸಗಿ ಬಸ್ಗಳು ಅಕ್ರಮವಾಗಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದವು’. </p>.<p>‘ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ನೇತೃತ್ವದ ತಂಡಗಳು ಬಾಗೇಪಲ್ಲಿ, ಅತ್ತಿಬೆಲೆ ಹಾಗೂ ಬಳ್ಳಾರಿ ರಸ್ತೆಯ ಎಸ್ಟೀಮ್ ಮಾಲ್ ಬಳಿಭಾನುವಾರ ದಾಳಿ ನಡೆಸಿದಾಗ ಒಟ್ಟು ನಾಲ್ಕು ಖಾಸಗಿ ಬಸ್ಗಳನ್ನು ಜಪ್ತಿ ಮಾಡಲಾಗಿದೆ‘ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>