<p><strong>ಬೆಂಗಳೂರು:</strong> ಕೋವಿಡ್ ರೋಗಿಗೆ ಬೆಡ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಸೋಂಕಿತ ವ್ಯಕ್ತಿಯ ಪತ್ನಿ ಮುಖ್ಯಮಂತ್ರಿ ನಿವಾಸದ ಮುಂದೆ ಧರಣಿ ಮಾಡಿದ ಬೆನ್ನಲ್ಲೇ ಸಂಜೆ ವಿಧಾನಸೌಧದ ಮುಂದೆ ಆಂಬ್ಯುಲೆನ್ಸ್ನಲ್ಲಿ ಸೋಂಕಿತ ಮಹಿಳೆಯನ್ನು ತಂದು ನಿಲ್ಲಿಸಿದ ಘಟನೆ ನಡೆದಿದೆ.</p>.<p>ಎರಡು ದಿನ ಅಲೆದಾಡಿದರೂ ಹಾಸಿಗೆ ಸಿಗಲಿಲ್ಲ. ಆದ್ದರಿಂದ ಇಲ್ಲಿ ತಂದಿದ್ದೇವೆ. ಹಾಸಿಗೆ ಕೊಡಿಸುವ ಜವಾಬ್ದಾರಿ ಸರ್ಕಾರದ್ದು ಎಂದು ಹೊಸಕೋಟೆಯ ಸೋಂಕಿತ ಮಹಿಳೆಯ ಸಂಬಂಧಿಕರು ಸುದ್ದಿಗಾರರಿಗೆ ಹೇಳಿದರು.</p>.<p>ಇಲ್ಲಿ ನಿಲ್ಲಿಸುವುದರಿಂದ ಪ್ರಯೋಜನ ಇಲ್ಲ, ಸೋಂಕಿತೆಗೆ ಆಸ್ಪತ್ರೆಗೆ ಒಯ್ಯಿರಿ, ಅಲ್ಲಿ ಆಮ್ಲಜನಕ ನೀಡುತ್ತಾರೆ. ಇಲ್ಲಿ ನಿಲ್ಲಿಸಿಕೊಂಡರೆ ಮಹಿಳೆಯ ಪ್ರಾಣಕ್ಕೆ ಅಪಾಯವಾಗಬಹುದು ಎಂದು ಪೊಲೀಸರು ಹೇಳಿದರು.</p>.<p>ನಮಗೆ ಬೆಡ್ ಸಿಗದೇ ಜಾಗ ಖಾಲಿ ಮಾಡುವುದಿಲ್ಲ ಎಂದು ಸೋಂಕಿತ ಮಹಿಳೆಯ ಪುತ್ರಿ ಹೇಳಿದರು.</p>.<p>ಆ ವೇಳೆಗೆ ಅಲ್ಲಿಗೆ ಬಂದ ವ್ಯಕ್ತಿಯೊಬ್ಬರು, ಇಲ್ಲಿ ಆಂಬ್ಯುಲೆನ್ಸ್ ನಿಲ್ಲಿಸಿದರೆ ಸಮಸ್ಯೆ ಏನು. ಆಕ್ಸಿಜನ್ ಅಂಬುಲೆನ್ಸ್ ಬರುತ್ತಿದೆ ಅಲ್ಲಿವರೆಗೆ ಇರಲಿ ಎಂದು ವಾದಿಸಿದರು. ‘ಇಲ್ಲಿ ಇಟ್ಟುಕೊಳ್ಳುವುದಕ್ಕಿಂತ ತಕ್ಷಣ ವಿಕ್ಟೋರಿಯಾಗೆ ಕರೆದೊಯ್ಯಿರಿ’ ಎಂದು ಪೊಲೀಸ್ ಅಧಿಕಾರಿ ಹೇಳಿದರು.</p>.<p>ನೋಡಿ ನಮ್ಮನ್ನು ಇಲ್ಲಿಂದ ಸಾಗಹಾಕಲು ನೋಡುತ್ತಿದ್ದಾರೆ ಎಂದು ಆ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೆಲವೇ ನಿಮಿಷಗಳಲ್ಲಿ ಕಾಂಗ್ರೆಸ್ ಕೇರ್ಸ್ನ ಆಕ್ಸಿಜನ್ ಹೊಂದಿದ ಆಂಬ್ಯುಲೆನ್ಸ್ ಅಲ್ಲಿಗೆ ಬಂದಿತು. ಮಹಿಳೆಯನ್ನು ಅಲ್ಲಿಗೆ ಸ್ಥಳಾಂತರಿಸಲಾಯಿತು. ವಿಕ್ಟೋರಿಯಗೆ ಕರೆದೊಯ್ಯಲು ಪೊಲೀಸರು ಸೂಚಿಸಿದರು. ‘ವಿಕ್ಟೋರಿಯಾದಲ್ಲಿ ಹಾಸಿಗೆ ಸಿಗದೇ ಮಹಿಳೆ ಸತ್ತರೆ ಸರ್ಕಾರವೇ ಹೊಣೆ ಹೊರಬೇಕು’ ಎಂದು ರಾಜಕಾರಣಿಯ ಪೋಷಾಕಿನಲ್ಲಿದ್ದ ವ್ಯಕ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ರೋಗಿಗೆ ಬೆಡ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಸೋಂಕಿತ ವ್ಯಕ್ತಿಯ ಪತ್ನಿ ಮುಖ್ಯಮಂತ್ರಿ ನಿವಾಸದ ಮುಂದೆ ಧರಣಿ ಮಾಡಿದ ಬೆನ್ನಲ್ಲೇ ಸಂಜೆ ವಿಧಾನಸೌಧದ ಮುಂದೆ ಆಂಬ್ಯುಲೆನ್ಸ್ನಲ್ಲಿ ಸೋಂಕಿತ ಮಹಿಳೆಯನ್ನು ತಂದು ನಿಲ್ಲಿಸಿದ ಘಟನೆ ನಡೆದಿದೆ.</p>.<p>ಎರಡು ದಿನ ಅಲೆದಾಡಿದರೂ ಹಾಸಿಗೆ ಸಿಗಲಿಲ್ಲ. ಆದ್ದರಿಂದ ಇಲ್ಲಿ ತಂದಿದ್ದೇವೆ. ಹಾಸಿಗೆ ಕೊಡಿಸುವ ಜವಾಬ್ದಾರಿ ಸರ್ಕಾರದ್ದು ಎಂದು ಹೊಸಕೋಟೆಯ ಸೋಂಕಿತ ಮಹಿಳೆಯ ಸಂಬಂಧಿಕರು ಸುದ್ದಿಗಾರರಿಗೆ ಹೇಳಿದರು.</p>.<p>ಇಲ್ಲಿ ನಿಲ್ಲಿಸುವುದರಿಂದ ಪ್ರಯೋಜನ ಇಲ್ಲ, ಸೋಂಕಿತೆಗೆ ಆಸ್ಪತ್ರೆಗೆ ಒಯ್ಯಿರಿ, ಅಲ್ಲಿ ಆಮ್ಲಜನಕ ನೀಡುತ್ತಾರೆ. ಇಲ್ಲಿ ನಿಲ್ಲಿಸಿಕೊಂಡರೆ ಮಹಿಳೆಯ ಪ್ರಾಣಕ್ಕೆ ಅಪಾಯವಾಗಬಹುದು ಎಂದು ಪೊಲೀಸರು ಹೇಳಿದರು.</p>.<p>ನಮಗೆ ಬೆಡ್ ಸಿಗದೇ ಜಾಗ ಖಾಲಿ ಮಾಡುವುದಿಲ್ಲ ಎಂದು ಸೋಂಕಿತ ಮಹಿಳೆಯ ಪುತ್ರಿ ಹೇಳಿದರು.</p>.<p>ಆ ವೇಳೆಗೆ ಅಲ್ಲಿಗೆ ಬಂದ ವ್ಯಕ್ತಿಯೊಬ್ಬರು, ಇಲ್ಲಿ ಆಂಬ್ಯುಲೆನ್ಸ್ ನಿಲ್ಲಿಸಿದರೆ ಸಮಸ್ಯೆ ಏನು. ಆಕ್ಸಿಜನ್ ಅಂಬುಲೆನ್ಸ್ ಬರುತ್ತಿದೆ ಅಲ್ಲಿವರೆಗೆ ಇರಲಿ ಎಂದು ವಾದಿಸಿದರು. ‘ಇಲ್ಲಿ ಇಟ್ಟುಕೊಳ್ಳುವುದಕ್ಕಿಂತ ತಕ್ಷಣ ವಿಕ್ಟೋರಿಯಾಗೆ ಕರೆದೊಯ್ಯಿರಿ’ ಎಂದು ಪೊಲೀಸ್ ಅಧಿಕಾರಿ ಹೇಳಿದರು.</p>.<p>ನೋಡಿ ನಮ್ಮನ್ನು ಇಲ್ಲಿಂದ ಸಾಗಹಾಕಲು ನೋಡುತ್ತಿದ್ದಾರೆ ಎಂದು ಆ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೆಲವೇ ನಿಮಿಷಗಳಲ್ಲಿ ಕಾಂಗ್ರೆಸ್ ಕೇರ್ಸ್ನ ಆಕ್ಸಿಜನ್ ಹೊಂದಿದ ಆಂಬ್ಯುಲೆನ್ಸ್ ಅಲ್ಲಿಗೆ ಬಂದಿತು. ಮಹಿಳೆಯನ್ನು ಅಲ್ಲಿಗೆ ಸ್ಥಳಾಂತರಿಸಲಾಯಿತು. ವಿಕ್ಟೋರಿಯಗೆ ಕರೆದೊಯ್ಯಲು ಪೊಲೀಸರು ಸೂಚಿಸಿದರು. ‘ವಿಕ್ಟೋರಿಯಾದಲ್ಲಿ ಹಾಸಿಗೆ ಸಿಗದೇ ಮಹಿಳೆ ಸತ್ತರೆ ಸರ್ಕಾರವೇ ಹೊಣೆ ಹೊರಬೇಕು’ ಎಂದು ರಾಜಕಾರಣಿಯ ಪೋಷಾಕಿನಲ್ಲಿದ್ದ ವ್ಯಕ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>